‘ರಾಣ’ ಚಿತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್

ಗುಜ್ಜಲ್ ಪುರುಷೋತ್ತಮ್ ನಿರ್ಮಾಣ ಮಾಡುತ್ತಿರುವ ಶ್ರೇಯಸ್ ಮಂಜು ನಾಯಕನಾಗಿ ನಟಿಸಲಿರುವ ನೂತನ ಸಿನಿಮಾ ರಾಣ ಸೆಟ್ಟೇರಿದೆ. ಇತ್ತೀಚೆಗಷ್ಟೇ ಶೀರ್ಷಿಕೆ ಅನಾವರಣ ಮಾಡಿಕೊಂಡಿದ್ದ ಸಿನಿಮಾ, ಇದೀಗ ಸರಳವಾಗಿ ಮುಹೂರ್ತ ಮುಗಿಸಿಕೊಂಡಿದ್ದು, ರಿಯಲ್ ಸ್ಟಾರ್ ಉಪೇಂದ್ರ ಮೊದಲ ದೃಶ್ಯಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಗುಜ್ಜಲ್ ಅವರ ತಾಯಿ ಕ್ಲಾಪ್ ಮಾಡಿ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

ಗವಿಪುರಂನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ಕಾರ್ಯ ನೆರವೇರಿದ್ದು, ಇನ್ನೇನು ಶೀಘ್ರದಲ್ಲಿಯೇ ಸಿನಿಮಾ ಕೆಲಸಗಳನ್ನು ಶುರು ಮಾಡಲಿದ್ದಾರಂತೆ ನಿರ್ದೇಶಕ ನಂದಕಿಶೋರ್. ನಂದಕಿಶೋರ್ ಮತ್ತು ನಿರ್ಮಾಪಕ ಗುಜ್ಜಲ್ ಮೊದಲ ಬಾರಿ ಈ ಸಿನಿಮಾ ಮೂಲಕ ಒಂದಾಗಿದ್ದು, ಮಾಸ್​ ಆ್ಯಕ್ಷನ್ ಶೈಲಿಯ ಸಿನಿಮಾ ಇದಾಗಿರದೆ ಎಂಬುದು ತಂಡದ ಮಾತು.

ಚಿತ್ರದ ಬಗ್ಗೆ ಮತ್ತು ಪಾತ್ರದ ಬಗ್ಗೆ ಮಾಹಿತಿ ನೀಡುವ ನಟ ಶ್ರೇಯಸ್, ‘ಈ ಹಿಂದಿನ ಸಿನಿಮಾಗಳಿಗೆ ಹೋಲಿಕೆ ಮಾಡಿದರೆ, ರಾಣದಲ್ಲಿ ತುಂಬ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಿದ್ದೇನೆ.

ಪಡ್ಡೆಹುಲಿಯಲ್ಲಿ ಕಾಮಿಡಿ ಫನ್ ಇತ್ತು. ವಿಷ್ಣು ಪ್ರಿಯ ಚಿತ್ರದಲ್ಲಿ ಸೌಮ್ಯ ಸ್ವಭಾವದ ಪಾತ್ರವಿದೆ. ಇದೀಗ ರಾಣದಲ್ಲಿ ಸಂಪೂರ್ಣ ಚೇಂಜ್ ಓವರ್ ಇದೆ. ಬಾಡಿ ಬಿಲ್ಡ್ ಮಾಡಿಕೊಳ್ಳುತ್ತಿದ್ದೇನೆ. ಆ್ಯಕ್ಷನ್​ಗೆ ಸಾಕಷ್ಟು ಪ್ರಾಮುಖ್ಯತೆ ಇರುವುದರಿಂದ ಅದಕ್ಕಾಗಿ ತಯಾರಿ ನಡೆಸಿದ್ದೇನೆ ಎನ್ನುತ್ತಾರೆ.

ಇನ್ನು ಪುತ್ರನ ಚಿತ್ರದ ಬಗ್ಗೆ ಕೆ. ಮಂಜು ಸಹ ಪ್ರತಿಕ್ರಿಯಿಸಿದ್ದಾರೆ. ಒಳ್ಳೆ ಕಥೆ ಸಿಕ್ಕಿದೆ. ಗುಜ್ಜರ್ ಅವರು ಮೊದಲಿಂದಲೂ ನನಗೆ ಸ್ನೇಹಿತರು. ಯಾವುದಾದರೂ ಸಿನಿಮಾ ಇದ್ದರೆ ನೀಡಿ ಎಂದಿದ್ದರು. ಅದರಂತೆ ನಂದಕಿಶೋರ್ ಮತ್ತು ಶ್ರೇಯಸ್ ಕಾಂಬಿನೇಷನ್ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಚಿತ್ರ ನಿರ್ಮಾಣದಲ್ಲಿ ಗುಜ್ಜರ್ ಅವರಿಗೆ ಕೃಷ್ಣನಂತೆ ಅವರೊಂದಿಗೆ ಬೆನ್ನಿಗೆ ನಿಲ್ಲುತ್ತೇನೆ ಎಂದರು.

ರೇಶ್ಮಾ ನಾಣಯ್ಯ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಂದನ್ ಶೆಟ್ಟಿ ಸಂಗೀತ ಒದಗಿಸುತ್ತಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆಎಂ ಪ್ರಕಾಶ್ ಸಂಕಲನ ಒಳಗೊಂಡಿದೆ. ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ. ಮತ್ತೊಂದೆಡೆ ಧ್ರುವ ಸರ್ಜಾ ಜೊತೆ ‘ದುಬಾರಿ’ ಸಿನಿಮಾ ಮಾಡಬೇಕಿದ್ದ ನಂದಕಿಶೋರ್ ಕಾರಣಾಂತರಗಳಿಂದ ಈ ಪ್ರಾಜೆಕ್ಟ್ ಕೈಬಿಟ್ಟಿದ್ದಾರೆ. ಈ ಸಿನಿಮಾ ಬದಲು ಈಗ ರಾಣ ಕೈಗೆತ್ತಿಕೊಂಡಿದ್ದು, ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!