ಸಿಎಂ ಗೆ ಸಲಹೆ ನೀಡಿದ ನಾಗತಿಹಳ್ಳಿ

“ಹೈಕಮಾಂಡ್, ಲೋ ಕಮ್ಯಾಂಡ್ ಹಂಗು ಮೀರಿ ಅದ್ಭುತ ಕೆಲಸ ಮಾಡಿ” ಎಂದು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, “ಪ್ರೀತಿಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಮನುಷ್ಯ ಪ್ರೀತಿ, ಸಾಹಿತ್ಯ ಪ್ರೀತಿ, ಪ್ರಾಣಿ ಪ್ರೀತಿ ಉಳ್ಳ ನೀವು ನನ್ನಂಥವರಿಗೆ ಆಸೆ ಹುಟ್ಟಿಸಿದ್ದೀರಿ. ಹೈ ಕಮಾಂಡ್, ಲೋ ಕಮ್ಯಾಂಡ್ ಹಂಗು ಮೀರಿ ಅದ್ಭುತ ಕೆಲಸ ಮಾಡಿ. ಚಮಚೆಗಳನ್ನು ದೂರವಿಡಿ. ಸಮಾಜದ ಕಟ್ಟ ಕಡೆಯ ಜೀವರ ಬಗ್ಗೆ ಕಾಳಜಿ ಇರಲಿ. ಅಧಿಕಾರವು ಅಲ್ಪಕಾಲೀನ. ಒಳಿತಾಗಲಿ” ಎಂದು ಹೇಳಿದ್ದಾರೆ.
ನಾಗತಿಹಳ್ಳಿ ಚಂದ್ರಶೇಖರ್ ಕೊನೆಯದಾಗಿ ‘ಇಂಡಿಯ ವರ್ಸಸ್ ಇಂಗ್ಲೆಡ್’ ಸಿನಿಮಾ ನಿರ್ದೇಶನ ಮಾಡಿದ್ದರು. ವಸಿಷ್ಠ ಸಿಂಹ ಮತ್ತು ಮಾನ್ವಿತಾ ಕಾಮತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಈ ಸಿನಿಮಾ ಯಶಸ್ಸು ಕಾಣಲಿಲ್ಲ. ನಾಗತಿಹಳ್ಳಿ ತಮ್ಮ ಮುಂದಿನ ಚಿತ್ರದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಬಿ.ಎಸ್ ಯಡಿಯೂರಪ್ಪ ಅವರು ಜುಲೈ 26ರಂದು ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದ ಶಾಸಕರಾದ 61 ವರ್ಷದ ಬಸವರಾಜ ಬೊಮ್ಮಾಯಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!