‘ಕಾಂತಾರ’ ಸಿನಿಮಾಕ್ಕೆ ಚಾಲನೆ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾಕ್ಕೆ ಚಾಲನೆ ನೀಡಲಾಗಿದೆ.

ಸಿನೆಮಾದ ಮುಹೂರ್ತವನ್ನು ತಮ್ಮ ಹುಟ್ಟೂರಾದ ಆನೆಗುಡ್ಡ ದೇವಾಲಯದಲ್ಲಿ ರಿಷಬ್ ಶೆಟ್ಟಿ ಮುಗಿಸಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು, ತಂತ್ರಜ್ಞರು,ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಹಾಜರಿದ್ದರು.

ಕಾಂತಾರ’ ಸಿನಿಮಾ ಹೊಂಬಾಳೆ ಫಿಲಮ್ಸ್‌ನ 11ನೇ ಸಿನಿಮಾ ಆಗಿದೆ. ಈ ಚಿತ್ರದ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದೆ. ಕರಾವಳಿ ಭಾಗದ ಪ್ರಮುಖ ಜಾನಪದ ಕ್ರೀಡೆಯಾಗಿರುವ ಕಂಬಳದ ಕುರಿತು ಸಿನಿಮಾ ಕಥಾಹಂದರ ಹೊಂದಿದ್ದು ರಿಷಬ್ ಶೆಟ್ಟಿ ಅವರು ನಿರ್ದೇಶನದ ಜೊತೆಗೆ ಚಿತ್ರದಲ್ಲಿ ನಾಯಕನಾಗಿ ನಟಿಸಲಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ನಾಲ್ಕನೇ ಸಿನಿಮಾ ‘ಕಾಂತಾರ’ ಆಗಿದೆ. ಈ ಹಿಂದೆ ರಿಷಬ್ ಶೆಟ್ಟಿ ಅವರು ‘ರಿಕ್ಕಿ’, ‘ಕಿರಿಕ್ ಪಾರ್ಟಿ’, ‘ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

ಕಂಬಳದ ಕುರಿತು ಮೊದಲ ಬಾರಿಗೆ ಕನ್ನಡದಲ್ಲಿ ಸಿನಿಮಾ ತಯಾರಿ ಆಗುತ್ತಿದ್ದು ಕರಾವಳಿ ಭಾಗ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಇದು ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.
ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಬಳಿಕ ಶಿವರಾಜ್ ಕುಮಾರ್ ನಟನೆಯ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಬಳಿಕ ಅವರು ‘ಕಿರಿಕ್ ಪಾರ್ಟಿ 2’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!