ಅಭಿಮಾನಿಗಳ ಜೊತೆ ಸುದೀಪ್ ಸಂವಾದ

ಕಿಚ್ಚ ಸುದೀಪ್ ಅವರು ಸೆ.2ರಂದು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿಗಳ ಜೊತೆಗೆ ಸಂವಾದ ನಡೆಸಲಿದ್ದಾರೆ.

ಕರೋನ ಹಿನ್ನೆಲೆಯಲ್ಲಿ ಈ ಬಾರಿಯೂ ಸುದೀಪ್ ಅವರು ತಮ್ಮ ಹುಟ್ಟು ಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸುತ್ತಿಲ್ಲ. ಆದರೆ ಡಿಜಿಟಲ್ ಒಟಿಟಿ ಫ್ಲಾಟ್‌ಫಾರ್ಮ್, ಅಧಿಕೃತ ಟ್ವಿಟ್ಟರ್, ಫೇಸ್‌ಬುಕ್, ಇನ್ಸ್ಟಾಗ್ರಾಂ ಖಾತೆಯಲ್ಲಿ ಸುದೀಪ್ ಲೈವ್ ಬರಲಿದ್ದಾರೆ ಎಂದು ಪ್ರಕಟಿಸಿದೆ. ಸೆಪ್ಟೆಂಬರ್ 2 ರಂದು ಸಂಜೆ 6 ಗಂಟೆಗೆ ಸುದೀಪ್ ಜೊತೆ ಅಭಿಮಾನಿಗಳು ಮಾತುಕತೆ ಮಾಡಬಹುದು ಎಂದು ಪ್ರಕಟನೆ ತಿಳಿಸಿದೆ.

ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಸೆ.2ರಂದು ‘ವಿಕ್ರಾಂತ್ ರೋಣ’ ಸಿನಿಮಾದ ಆಂಥೆಮ್ ಹಾಡು ಬಿಡುಗಡೆಯಾಗಲಿದೆ. ಕೋಟಿಗೊಬ್ಬ 3 ಚಿತ್ರತಂಡದಿಂದ ಹೊಸ ಘೋಷಣೆ ನಿರೀಕ್ಷೆ ಮಾಡಲಾಗಿದೆ. ಅಂತೆಯೇ ಹೊಸ ಸಿನಿಮಾಗಳು ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದೆ.

ಈ ವರ್ಷವೂ ಹುಟ್ಟುಹಬ್ಬ ಆಚರಿಸುವುದು ಬೇಡ ಎಂದು ಸುದೀಪ್ ಈಗಾಗಲೇ ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ.

”ನನ್ನೆಲ್ಲಾ, ಪ್ರೀತಿಯ ಅಭಿಮಾನಿಗಳಿಗೆ ಸ್ನೇಹಿತರಲ್ಲಿ ಮನವಿ. ಕೋವಿಡ್ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ಈ ವರ್ಷವೂ ನಾನು ನನ್ನ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲು ಆಗುತ್ತಿಲ್ಲ. ನೀವು ಇದ್ದಲ್ಲಿಂದಲೇ ನಿಮ್ಮ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ ಎಂದು ಕೋರುವ ನಿಮ್ಮ ಕಿಚ್ಚ. ಕ್ಷಮೆ ಇರಲಿ, ಮುಂದೆ ಪರಿಸ್ಥಿತಿ ಸುಧಾರಿಸಿದ ಬಳಿಕ ನಿಮ್ಮೆಲ್ಲರನ್ನು ಭೇಟಿಯಾಗುತ್ತೇನೆ” ಎಂದು ಸುದೀಪ್ ಮನವಿ ಮಾಡಿದ್ದರು.
ಸುದೀಪ್ ಅವರ ಹುಟ್ಟುಹಬ್ಬದಂದು ಮುಖತಃ ಅಭಿಮಾನಿಗಳಿಗೆ ಸುದೀಪ್ ಅವರನ್ನು ಭೇಟಿಯಾಗಲು ಅವಕಾಶ ಇಲ್ಲದೆ ಹೋದರೂ, ಈಗ ಸಂವಾದದಲ್ಲಿ ಭಾಗಿಯಾಗಲು ಅವಕಾಶ ಸಿಕ್ಕಿರುವುದು ಸಂತಸಕ್ಕೆ ಕಾರಣವಾಗಿದೆ.
______________

Be the first to comment

Leave a Reply

Your email address will not be published. Required fields are marked *

Translate »
error: Content is protected !!