ಅ.15ಕ್ಕೆ ಕ್ರಾಂತಿ ಮುಹೂರ್ತ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಕ್ರಾಂತಿ ಚಿತ್ರದ ಮೂಹೂರ್ತ ವಿಜಯದಶಮಿಯ ಶುಭ ದಿನವಾದ ಅಕ್ಟೋಬರ್ 15 ರಂದು ನಡೆಯಲಿದ್ದು, ಬಳಿಕ ಶೂಟಿಂಗ್ ಆರಂಭವಾಗಲಿದೆ. ರಾಬರ್ಟ್ ಚಿತ್ರದ ಬಳಿಕ ದರ್ಶನ್ ಅವರ ಯಾವುದೇ ಚಿತ್ರಗಳು ತೆರೆಗೆ ಬಂದಿಲ್ಲ. ಕೆಲ ದಿನಗಳ ಹಿಂದೆ ಕ್ರಾಂತಿ ಸಿನಿಮಾ ತಂಡ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದು ಇದಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಮೀಡಿಯಾ ಹೌಸ್ ಬ್ಯಾನರ್ ನಲ್ಲಿ ಶೈಲಜಾ ನಾಗ್, ಬಿ ಸುರೇಶ್ ನಿರ್ಮಾಣ ಮಾಡುತ್ತಿರುವ ಕ್ರಾಂತಿ ಸಿನಿಮಾ ಕನ್ನಡ ಅಲ್ಲದೇ, ತಮಿಳು, ತೆಲುಗು ಮತ್ತು ಮಲಯಾಳಂ ಹಾಗೂ ಹಿಂದಿಯಲ್ಲಿ ತಯಾರಾಗಲಿದೆ. ಸಂಗೀತ್ ನಿರ್ದೇಶಕ ಹರಿಕೃಷ್ಣ ಅವರು ಚಿತ್ರದ ನಿರ್ದೇಶಕರಾಗಿ ಆಯ್ಕೆ ಆಗಿದ್ದಾರೆ. ಕಲಾವಿದರ ಹೆಚ್ಚಿನ ವಿವರಗಳು ಇನ್ನಷ್ಟೇ ಘೋಷಣೆ ಆಗಬೇಕಿದೆ.

ಈ ಹಿಂದೆ ಯಜಮಾನ ಸಿನಿಮಾ ಇದೇ ಪ್ರೊಡಕ್ಷನ್ ಹೌಸ್ ನಲ್ಲಿ ನಿರ್ಮಾಣ ಆಗಿ ಸೂಪರ್ ಹಿಟ್ ಆಗಿತ್ತು. ಅದೇ ತಂಡ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.
ಲಾಕ್ ಡೌನ್ ಬಳಿಕ ಸ್ಟಾರ್ ನಟರ ಚಿತ್ರಗಳು ಬಂದಿದ್ದರೂ, ದರ್ಶನ್ ಅವರ ಯಾವುದೇ ಚಿತ್ರ ನಿರ್ಮಾಣ ಆಗಿಲ್ಲ. ಹೊಸ ಸಿನಿಮಾ ನೋಡಲು ದರ್ಶನ್ ಅಭಿಮಾನಿಗಳು ಕಾಯುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!