ಹಿರಿಯ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ

ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರು ಫೆಬ್ರವರಿ 14ರಂದು ನಿಧನರಾಗಿದ್ದಾರೆ.

84 ವಯಸ್ಸಿನ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಿನ್ನೆ ಸಂಜೆ 7.30ರ ಸುಮಾರಿಗೆ ಅವರು ನಿಧನರಾದರು.

ಭಾರ್ಗವಿ ಅವರು ನಟಿ ಸಂಯುಕ್ತ ಹೊರನಾಡು ಅವರ ಅಜ್ಜಿ. ಇವರು ಸ್ಯಾಂಡಲ್‌ವುಡ್‌ ನಟರಾದ ಪ್ರಕಾಶ್ ಬೆಳವಾಡಿ ಮತ್ತು ಸುಧಾ ಬೆಳವಾಡಿ ಅವರ ಅಮ್ಮ ಆಗಿದ್ದಾರೆ. ರಂಗಭೂಮಿಯಲ್ಲಿ ಮೇಕಪ್ ನಾಣಿ ಎಂದು ಪ್ರಸಿದ್ಧ ಪಡೆದಿದ್ದ ನಾರಾಯಣ್ ಅವರನ್ನು ಭಾರ್ಗವಿ ನಾರಾಯಣ್ ವಿವಾಹವಾಗಿದ್ದರು. ಧಾರಾವಾಹಿ, ರಂಗಭೂಮಿ, ಸಿನಿಮಾ, ಸಾಹಿತ್ಯ ಲೋಕದಲ್ಲಿ ಅವರು ಸಾಧನೆ ಮಾಡಿದ್ದರು.

ಸಹಜ ಅಭಿನಯದಿಂದ ಗಮನ ಸೆಳೆದಿದ್ದ ಭಾರ್ಗವಿ ನಾರಾಯಣ್ ಅವರು ಟಿ.ಎನ್.ಸೀತಾರಾಮ್ ಅವರ ಧಾರಾವಾಹಿಯಲ್ಲಿ ನಟಿಸಿದ್ದರು.

ಭಾರ್ಗವಿ ನಾರಾಯಣ್ ಅವರು 600ಕ್ಕೂ ಹೆಚ್ಚು ನಾಟಕಗಳಲ್ಲಿ ನಟಿಸಿದ್ದರು. ‘ಬಾ ನಲ್ಲೆ ಮಧುಚಂದ್ರಕೆ’, ‘ಎರಡು ಕನಸು’, ‘ಪಲ್ಲವಿ ಅನುಪಲ್ಲವಿ’, ಜಂಬೂ ಸವಾರಿ, ‘ಇದೊಳ್ಳೆ ರಾಮಾಯಣ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ‘ರಾಜಕುಮಾರ’ ಸಿನಿಮಾದಲ್ಲೂ ಅವರು ಪಾತ್ರ ಮಾಡಿದ್ದರು. ಭಾರ್ಗವಿ ನಾರಾಯಣ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!