ಮಿಥ್ಯ ನಿರ್ಮಾಣಕ್ಕೆ ಹೊರಟ ರಕ್ಷಿತ್​ ಶೆಟ್ಟಿ

ರಕ್ಷಿತ್​ ಶೆಟ್ಟಿ “ಮಿಥ್ಯ” ಹೆಸರಿನ ಹೊಸ ಚಿತ್ರದ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಈ ಚಿತ್ರದ ಮೂಲಕ ಸುಮಂತ್​ ಭಟ್​ ಸ್ವತಂತ್ರ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ. ಸಿನಿಮಾದ ಮೂಲಕ 11 ವರ್ಷದ ಬಾಲಕನ ನೋವು ಮತ್ತು ವಿಮೋಚನೆಯ ಕಥೆಯನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ.

ತಂದೆ-ತಾಯಿಯ ನಿಧನದ ನಂತರ ಅವರ ನೆನಪುಗಳಿಂದ ಹೊರಬರಲಾರದ ಪುಟ್ಟ ಬಾಲಕನೊಬ್ಬ ಹೊಸ ಪ್ರಪಂಚವನ್ನು ಹುಡುಕಿಕೊಂಡು ಹೊರಡುತ್ತಾನೆ. ಹಳೆಯ ಸಂಬಂಧಗಳಲ್ಲಿ ಹೊಸತನ ಕಾಣುವ ಹಾಗೂ ಹೊಸ ಸ್ನೇಹಿತರಲ್ಲಿ ಹಳೆಯ ಗೆಳೆತನ ಹುಡುಕುವ ಪಯಣವೇ ‘ಮಿಥ್ಯ’ ಆಗಿದೆ.

ಮೂಲತಃ ಸಾಫ್ಟ್​ವೇರ್​ ಇಂಜಿನಿಯರ್​ ಆಗಿದ್ದ ಸುಮಂತ್​ ಭಟ್​ ಈ ಮುನ್ನ ಪರಂವಃ ಸ್ಟುಡಿಯೋಸ್​ ನಿರ್ಮಾಣದ ‘ಏಕಂ’ ಎಂಬ ವೆಬ್​ಸೀರೀಸ್​ನ ನಾಲ್ಕು ಕಂತುಗಳನ್ನು ಬರೆದು ನಿರ್ದೇಶಿಸಿದ್ದಾರೆ. ಈಗ ಅವರು ಸ್ವತಂತ್ರ ನಿರ್ದೇಶಕರಾಗಿ ‘ಮಿಥ್ಯ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಈ ಹಿಂದೆ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಮತ್ತು ‘ವಿಕ್ರಾಂತ್​ ರೋಣ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲನಟ ಆತಿಶ್​ ಶೆಟ್ಟಿ ಇಲ್ಲಿ ಮಿಥುನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಕಾಶ್​ ತುಮ್ಮಿನಾಡು, ರೂಪಾ ವರ್ಕಾಡಿ ಮುಂತಾದವರು ನಟಿಸುತ್ತಿದ್ದಾರೆ.

‘ಮಿಥ್ಯ’ ಚಿತ್ರಕ್ಕೆ ಉದಿತ್​ ಖುರಾನ ಛಾಯಾಗ್ರಹಣ, ಮಿಥುನ್​ ಮುಕುಂದನ್​ ಅವರ ಸಂಗೀತವಿದೆ. ಭುವನೇಶ್​ ಮಣಿವಣ್ಣನ್​ ಸಂಕಲನ, ಶ್ರೇಯಾಂಕ್​ ನಂಜಪ್ಪ ಸೌಂಡ್​ ಡಿಸೈನರ್​ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!