ಕರುನಾಡ ಶಾಲೆ ಸಾಂಗ್ ರಿಲೀಸ್

ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಬೆಳಕು ಚೆಲ್ಲುವ ಕರುನಾಡ ಶಾಲೆ ಸಿನಿಮಾದ ಸಾಂಗ್ ರಿಲೀಸ್ ಆಗಿದೆ.

ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರತಂಡ ಶಿಕ್ಷಕರ ದಿನಾಚರಣೆ ದಿನದಂದು ಚಿತ್ರದ ಸಾಂಗ್ ಬಿಡುಗಡೆಗೊಳಿಸಿತು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನಾಯಕ ಪಡುವ ಸಾಹಸ ಚಿತ್ರದ ಪ್ರಮುಖ ಕಥಾವಸ್ತು ಎಂಬುದಾಗಿ ಚಿತ್ರತಂಡ ತಿಳಿಸಿದೆ.

ಬಾಲ್ಯದ ನೆನಪುಗಳನ್ನು ನೆನಪಿಸುವಂಥ ದೃಶ್ಯಗಳನ್ನು ಸಂಯೋಜಿಸಲಾಗಿರುವ ಗೀತೆಯೊಂದನ್ನು ಚಿತ್ರತಂಡ ಬಿಡುಗಡೆಗೊಳಿಸಿತು.

ಆಯುರ್ ಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ನಾಯಕನ ತಂದೆ ಪಾತ್ರದಲ್ಲಿ ಹಿರಿಯ ನಟ ರಮೇಶ್ ಭಟ್ ಅಭಿನಯಿಸಿದ್ದಾರೆ. ಉಳಿದಂತೆ ರಿಯಾ ದೇವಾಡಿಗ, ರಾಜೀವ್ ಕೊಠಾರಿ, ರಘು ಪಾಂಡೇಶ್ವರ, ಸ್ಪೂರ್ತಿ ದೊಡ್ಮನೆ, ಸ್ಮಿತಾ, ಉಲ್ಲಾಸ್, ಮನೀಶ್, ನಾಗರಾಜ್ ಅಭಿನಯಿಸಿದ್ದಾರೆ.

ಜಿ.ಆರ್. ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರಕ್ಕೆ ಮುತ್ತಾರೀಫ್ ತೆಕ್ಕಟ್ಟೆ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ ಇದೆ. ದಿಲ್ ಶಾದ್ ಬಂಡವಾಳ ಹೂಡಿದ್ದಾರೆ.

ಗಿರೀಶ್, ಯೋಗೇಂದ್ರ ಕನ್ನುಕೆರೆ, ಸಚಿನ್ ಸಹ ನಿರ್ಮಾಪಕರಾಗಿದ್ದಾರೆ. ಆಕಾಶ್ ಪರ್ವ ಸಂಗೀತ, ಆಯುರ್ ಸ್ವಾಮಿ ಸಾಹಿತ್ಯ – ಸಂಕಲನ, ರಾಜೇಶ್ ಕೃಷ್ಣನ್ ಹಿನ್ನೆಲೆ ಗಾಯನ, ಜಯರಾಮ್ ಆಲೂರು ಛಾಯಾಗ್ರಹಣ, ರಾಘವ ನೃತ್ಯ ನಿರ್ದೇಶನವಿದೆ.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!