“ಕಾಳಿಪ್ರಸಾದ್” ಚಿತ್ರದ ಮುಹೂರ್ತ

“ಕಾಳಿಪ್ರಸಾದ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಭೂಮಿಕಾ ಚಿತ್ರಮಂದಿರದಲ್ಲಿ ನಡೆಯಿತು.

ಹಿರಿಯ ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ ಅವರು “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ ನೀಡಿದರು. ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು “ಗುರಿ” ಚಿತ್ರದ ಡಾ||ರಾಜ್ ಪಾತ್ರವಾದ ಕಾಳಿಪ್ರಸಾದ್ ಹೆಸರಿನಲ್ಲಿ ಚಿತ್ರವನ್ನು ಆರಂಭಿಸಿದ್ದಾರೆ.

ರಾಜಕುಮಾರ್ ಮೇಲಿನ ಪ್ರೀತಿಯಿಂದಾಗಿ ಚಿತ್ರಕ್ಕೆ “ಕಾಳಿಪ್ರಸಾದ್” ಎಂದು ಹೆಸರಿಟ್ಟಿದ್ದೇನೆ. ನಮ್ಮ ಚಿತ್ರದಲ್ಲಿ ಲವ್, ಆಕ್ಷನ್, ಸೆಂಟಿಮೆಂಟ್ ಎಲ್ಲಾ‌ ಅಂಶಗಳು ಇದೆ‌. ಕರ್ನಾಟಕದ ಐತಿಹಾಸಿಕ ಸ್ಥಳಗಳಲ್ಲಿ ಚಿತ್ರೀಕರಣ ನಡೆಸುತ್ತೇವೆ. ಐದು ಹಾಡುಗಳಿವೆ. ದೊಡರಂಗೇಗೌಡರು ಬರೆದಿರುವ ಹಾಡೊಂದನ್ನು ಬಳಸಿಕೊಂಡಿದ್ದೇವೆ ಎಂದು ಚಿತ್ರದ ಬಗ್ಗೆ ನಿರ್ದೇಶಕ ಕೆ.ವಿ.ಎಸ್ ರಾಯ್ ಮಾಹಿತಿ ನೀಡಿದರು.

ನಾಯಕ ರಾಮ ತೇಜ್ , ನಾಯಕಿಯರಾದ ಸೇಜ್, ಪ್ರಿಯಾ ಶೆಟ್ಟಿ, ವೈಷ್ಣವಿ, ಸಂಗೀತ ನಿರ್ದೇಶಕಿ ಇಂದು ವಿಶ್ವನಾಥ್, ಚಿತ್ರದ ಉಸ್ತುವಾರಿ ಹೊತ್ತಿರುವ ಓಂ ಸತೀಶ್ ಚಿತ್ರದ ಬಗ್ಗೆ ಮಾತನಾಡಿದರು.

ಕೆ.ವಿ.ಎಸ್ ರಾಯ್ ಹಾಗೂ ರಾಮ್ ತೇಜ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಎಸ್ ಎನ್ ಬಿ ಮೂರ್ತಿ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ, ತ್ರಿಭುವನ್ ನೃತ್ಯ ನಿರ್ದೇಶನ ಇದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!