ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ರಜನೀಕಾಂತ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಸರಕಾರ, ನವಂಬರ್ 1ರಂದು ರಾಜ್ಯೋತ್ಸವ ಸಂದರ್ಭದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಚಿತ್ರರಂಗದ ದಿಗ್ಗಜರ ಜೊತೆಗೆ ಸೂಪರ್ ಸ್ಟಾರ್ ರಜನೀಕಾಂತ್, ಜ್ಯೂ.ಎನ್ ಟಿಆರ್ ಗೂ ವಿಶೇಷ ಆಹ್ವಾನ ನೀಡಲಾಗಿದೆ.

ಕಾರ್ಯಕ್ರಮ ವಿಧಾನಸೌಧದ ಮಹಾಧ್ವಾರದ ಮೆಟ್ಟಿಲುಗಳ ಮೇಲೆ ವೇದಿಕೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವೇ ಆಯೋಜಿಸುತ್ತಿದೆ.

ಸಾರ್ವಜನಿಕರಿಗೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿಗಳು ಆಹ್ವಾನ ನೀಡಿದ್ದಾರೆ. ಇದರ ಜೊತೆಗೆ ಚಿತ್ರರಂಗದ ಗಣ್ಯಾತಿಗಣ್ಯರನ್ನು ಸರ್ಕಾರವೇ ಆಹ್ವಾನಿಸುತ್ತಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!