ಬೆಂಗಳೂರು – ಮೈಸೂರಿನಲ್ಲಿ ಬನಾರಸ್ ಯಾತ್ರೆ

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರತಂಡ ಬನಾರಸ್ ಯಾತ್ರೆ ಆರಂಭಿಸಿದೆ.

ಬೆಂಗಳೂರು-ಮೈಸೂರು ಯಾತ್ರೆ ಮುಗಿಸಿಕೊಂಡಿರುವ ಚಿತ್ರತಂಡ, ಅಭಿಮಾನಿಗಳೊಂದಿಗೆ ಬೆಂಗಳೂರಿಗೆ ಮರಳಿದೆ.

ಬೆಂಗಳೂರಿನ ಟೌನ್ ಹಾಲ್‌ನಿಂದ ಈ ಯಾತ್ರೆ ಆರಂಭವಾಯಿತು. ಅಲ್ಲಿಂದ ಹೊರಟ ಬನಾರಸ್ ಯಾತ್ರೆ ಆ ನಂತರ ಮೈಸೂರು ರಸ್ತೆಯತ್ತ ಸಾಗಿ ಬಂದು, ಗಾಳಿ ಆಂಜನೇಯ ದೇವಸ್ಥಾನಕ್ಕೆ ತೆರಳಿತು.

ಬಳಿಕ ರಾಜರಾಜೇಶ್ವರಿನಗರ, ಕೆಂಗೇರಿ ಹಾದಿಯಲ್ಲಿ ಯಾತ್ರೆ ಮುಂದುವರೆಯಿತು. ಅಂಚೆಪುರ, ಕಂಬಿಪಾಳ್ಯ ಮಾರ್ಗವಾಗಿ ಸಾಗಿ ರಾಮನಗರದಲ್ಲಿ ರೋಡ್ ಶೋ ನಡೆಸಲಾಯಿತು.

ನಂತರ ಬನಾರಸ್ ಯಾತ್ರೆ ಚೆನ್ನಪಟ್ಟಣಕ್ಕೆ ತೆರಳಿತು. ಅಲ್ಲಿ ಅದ್ದೂರಿಯಾಗಿ ರೋಡ್ ಶೋ ನೆರವೇರಿತು. ಮದ್ದೂರಿನಿಂದ ಹಾದು ಹೋಗಿ ಮಂಡ್ಯಕ್ಕೆ ತೆರಳಿದ ರೋಡ್ ಶೋ ನಡೆಯಿತು. ಅಲ್ಲಿನ ದೇವಸ್ಥಾನ ದರ್ಗಾಗಳಿಗೂ ಭೇಟಿಯಿತ್ತ ಝೈದ್ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಐದು ಗಂಟೆ ಸುಮಾರಿಗೆ ಶ್ರೀರಂಗಪಟ್ಟಣಕ್ಕೆ ತೆರಳಿ ಅಲ್ಲಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಾಯಿತು. ಬಳಿಕ ಮೈಸೂರು ನಗರದಲ್ಲಿ ಅದ್ದೂರಿಯಾಗಿ ರೋಡ್ ಶೋ ನಡೆಯಿತು. ಬಳಿಕ ಬೆಂಗಳೂರು-ಮೈಸೂರು ಯಾತ್ರೆ ಮುಗಿಸಿದ ಝೈದ್ ತಮ್ಮ ತಂಡ, ಅಭಿಮಾನಿಗಳೊಂದಿಗೆ ಬೆಂಗಳೂರಿಗೆ ಮರಳಿದ್ದಾರೆ.

ಈ ಚಿತ್ರ ನವೆಂಬರ್ 4ರಂದು ದೇಶಾದ್ಯಂತ ತೆರೆಗಾಣಲಿದೆ.
____

Be the first to comment

Leave a Reply

Your email address will not be published. Required fields are marked *

Translate »
error: Content is protected !!