‘ಸಿಂಧೂರ ಲಕ್ಷ್ಮಣ’ನಾಗಿ ಡಾಲಿ

ಸಿಂಧೂರ ಲಕ್ಷ್ಮಣನಾಗಿ ಐತಿಹಾಸಿಕ ಪಾತ್ರದಲ್ಲಿ ಮಿಂಚಲು ಡಾಲಿ ಧನಂಜಯ ರೆಡಿಯಾಗಿದ್ದಾರೆ.

ಒಂದರ ಹಿಂದೊದರಂತೆ ಸಿನಿಮಾಗಳಲ್ಲಿ ಧನಂಜಯ್ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ರಮ್ಯಾ ಜೊತೆ ಉತ್ತರಕಾಂಡ ಚಿತ್ರ ಅನೌನ್ಸ್ ಆದ ಬೆನ್ನಲ್ಲೆ ಇದೀಗ ಮತ್ತೊಂದು ಸಿನಿಮಾಗೆ ಧನಂಜಯ್ `ರಾಬರ್ಟ್‌’ ಖ್ಯಾತಿಯ ನಿರ್ಮಾಪಕ ಉಮಾಪತಿ ನಿರ್ಮಾಣದ ಚಿತ್ರಕ್ಕೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಉತ್ತರ ಕರ್ನಾಟಕದ ಹೋರಾಟಗಾರ `ವೀರ ಸಿಂಧೂರ ಲಕ್ಷ್ಮಣ’ನಾಗಿ ಬರಲು ಡಾಲಿ ಸಿದ್ಧತೆ ನಡೆಸಿದ್ದಾರೆ.

ನಿರ್ಮಾಪಕ ಉಮಾಪತಿ `ಸಿಂಧೂರ ಲಕ್ಷ್ಮಣʼ ಕಥೆಯನ್ನು ಕನ್ನಡದ ಸೂಪರ್ ಸ್ಟಾರ್ ದರ್ಶನ್ ಅವರಿಗೆ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ದರು. ಈಗ ಬದಲಾವಣೆ ಆಗಿದ್ದು, ಕಥೆ ಕೇಳಿ ಡಾಲಿ ಕೂಡ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ತರುಣ್ ಸುಧೀರ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರಲಿದೆ.

ಉತ್ತರ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಭಾಗಗಳಲ್ಲಿ ಸಿಂಧೂರ ಲಕ್ಷ್ಮಣ ಅವರನ್ನು ಅಗಾಧವಾಗಿ ಗೌರವಿಸುತ್ತಾರೆ. ಸ್ವಾತಂತ್ರ್ಯಕ್ಕಾಗಿ ತಮ್ಮದೇ ಶೈಲಿಯಲ್ಲಿ ಸಿಂಧೂರ ಲಕ್ಷ್ಮಣ ಹೋರಾಡಿದ್ದರು. ಬಡವರ ಬಳಿ ತೆರಿಗೆ ವಸೂಲಿ ಮಾಡುತ್ತಿದ್ದ ಬ್ರಿಟಿಷರಿಗೆ ಸಿಂಧೂರ ಲಕ್ಷ್ಮಣ ತಕ್ಕ ಪಾಠ ಕಲಿಸಿದ್ದರು. ಈ ಪಾತ್ರಕ್ಕೆ ಡಾಲಿ ಜೀವ ತುಂಬಲಿದ್ದಾರೆ.

ಈಗಾಗಲೇ ಸ್ಕ್ರಿಪ್ಟ್ ವರ್ಕ್ ಕೂಡ ನಡೆಯುತ್ತಿದ್ದು, ಸದ್ಯದಲ್ಲೇ ಸಿನಿಮಾದ ಕುರಿತು ಮತ್ತಷ್ಟು ಅಪ್ ಡೇಟ್ ಸಿಗಲಿದೆ.

ಇತ್ತೀಚೆಗೆ ಡಾಲಿ ನಟಿಸಿರುವ ಸಲಗ, ರತ್ನನ್ ಪ್ರಪಂಚ, ಬೈರಾಗಿ, ಪುಷ್ಪ, ಹೆಡ್‌ಬುಷ್ ಚಿತ್ರಗಳು ಸಿಕ್ಕಾಪಟ್ಟೆ ಸದ್ದು ಮಾಡಿವೆ. ಹೊಸ ಚಿತ್ರದ ಬಗ್ಗೆ ಕುತೂಹಲ ಉಂಟಾಗಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!