ಡಿ.2ರಂದು ‘ಧರಣಿ ಮಂಡಲ ಮಧ್ಯದೊಳಗೆ’ ರಿಲೀಸ್

‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಡಿಸೆಂಬರ್ 2 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ಗುಳ್ಟು ಸಿನಿಮಾ ಖ್ಯಾತಿಯ ನವೀನ್ ಶಂಕರ್ ಹಾಗೂ ಐಶಾನಿ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಶ್ರೀಧರ್ ಶಿಕಾರಿಪುರ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ. ಸ್ಟಾರ್ ನಿರ್ದೇಶಕ ಪೂರಿ ಜಗನ್ನಾಥ್ ಅವರೊಂದಿಗೆ ನಿರ್ದೇಶನ ವಿಭಾಗದಲ್ಲಿ ದುಡಿದ ಅನುಭವ ಶ್ರೀಧರ್ ಅವರಿಗಿದೆ.

ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರ ಒಳಗೊಂಡ ಈ ಸಿನಿಮಾ ಪ್ರೇಕ್ಷಕರಿಗೆ ಥ್ರಿಲ್ ನೀಡಲಿದೆ. ಜೊತೆಗೆ ಪ್ರೀತಿ, ಸೆಂಟಿಮೆಂಟ್ ಎಳೆಗಳನ್ನು ಉಣ ಬಡಿಸಲಿದೆ.

ಬಾಕ್ಸಿಂಗ್ ನಲ್ಲಿ ಆಸಕ್ತಿ ಇರುವ ಹುಡುಗನ ಸುತ್ತ ಹೆಣೆಯಲಾದ ಕಥೆ ಚಿತ್ರದಲ್ಲಿದೆ. ಚಿತ್ರದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ನಟಿಸಿದ್ದಾರೆ.

ಬಾಕ್ಸ್ ಆಫೀಸ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಓಂಕಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವೀರೇಂದ್ರ ಕಾಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ.

ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ರೋಣದ ಬಕ್ಕೇಶ್, ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ನಿರ್ದೇಶನ, ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ.

ವಿಜಯ್ ಪ್ರಕಾಶ್, ಶರಣ್ ಹಾಡಿರುವ ಹಾಡುಗಳು ಸೂಪರ್ ಹಿಟ್ ಆಗಿದ್ದು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!