ಅಭಿಷೇಕ್ ಅಂಬರೀಷ್ ಗೆ ಸಪ್ತಮಿ ಗೌಡ ನಾಯಕಿ

ಸಪ್ತಮಿ ಗೌಡ ಅವರು ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ.

ಈ ಚಿತ್ರದ ಮುಹೂರ್ತ ಕಾರ್ಯಕ್ರಮ ಶ್ರೀ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ನಟ ಅಭಿಷೇಕ್ ಅಂಬರೀಶ್, ನಟಿ ಸಪ್ತಮಿ ಗೌಡ, ನಿರ್ದೇಶಕ ಕೃಷ್ಣ ಹಾಗೂ ನಿರ್ದೇಶಕಿ ಸ್ವಪ್ನ ಕೃಷ್ಣ ಸೇರಿದಂತೆ ಚಿತ್ರತಂಡದ ಇನ್ನಿತರರು ಭಾಗವಹಿಸಿದ್ದರು.

ಮುಹೂರ್ತದ ಫೋಟೊಗಳನ್ನು ನಟಿ ಸಪ್ತಮಿಗೌಡ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಕ್ಕೆ ಸಂಗೀತ ನಿರ್ದೇಶಕನಾಗಿ ಚರಣ್ ರಾಜ್ ಸಂಗೀತ ನಿರ್ದೇಶಕನಾಗಿ ಕೆಲಸ ನಿರ್ವಹಿಸಲಿದ್ದಾರೆ ಎಂಬ ಸುದ್ದಿ ಇದ್ದು, ಕೆಜಿಎಫ್ ಖ್ಯಾತಿಯ ಚಂದ್ರಮೌಳಿ ಸಂಭಾಷಣೆ ಬರೆಯಲಿದ್ದಾರೆ.

ಸಪ್ತಮಿ ಗೌಡ ಕಾಂತಾರ ಚಿತ್ರದ ಮೂಲಕ ದೊಡ್ಡ ಮಟ್ಟದಲ್ಲಿ ದೇಶವ್ಯಾಪಿ ಹೆಸರು ಮಾಡಿದ್ದಾರೆ.

ಕಾಂತಾರ ಚಿತ್ರದಲ್ಲಿ ಲೀಲಾ ಪಾತ್ರದಲ್ಲಿ ಫಾರೆಸ್ಟ್ ಗಾರ್ಡ್ ಆಗಿ ನಟಿಸಿರುವ ನಟಿ ಸಪ್ತಮಿ ಗೌಡ ಈ ಒಂದು ಚಿತ್ರದಿಂದ ಇದೀಗ ಕನ್ನಡ ಮಾತ್ರವಲ್ಲದೇ ತೆಲುಗು ಹಾಗೂ ತಮಿಳು ಚಿತ್ರರಂಗಗಳಿಂದಲೂ ಬೇಡಿಕೆ ಪಡೆದುಕೊಂಡಿರುವ ನಟಿ ಎನಿಸಿಕೊಂಡಿದ್ದಾರೆ.

ಸಪ್ತಮಿ ಗೌಡ ಅವರನ್ನು ಹಲವು ಆಫರ್ಸ್ ಹುಡುಕಿಕೊಂಡು ಬರುತ್ತಿದ್ದು, ನಟಿ ಯಾವ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಪ್ರಶ್ನೆ ಹಲವರಲ್ಲಿತ್ತು. ಈಗ ಅದಕ್ಕೆ ತೆರೆ ಬಿದ್ದಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!