ಶೀಘ್ರ ಸೆಟ್ಟೇರಲಿದೆ ‘ಜಸ್ಟ್ ಪಾಸ್’

‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಗಾಂಧಿನಗರದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸ ಸಿನಿಮಾಗೆ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ.

ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೆಣೆದು ನಿರ್ದೇಶನಕ್ಕೆ ಕೆ.ಎಂ ರಘು ಸಜ್ಜಾಗಿದ್ದಾರೆ ಇದೇ ತಿಂಗಳು 14ರಂದು ಸಿನಿಮಾ ಸೆಟ್ಟೇರಲಿದೆ. ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ.

‘ಜಸ್ಟ್ ಪಾಸ್’ ಚಿತ್ರಕ್ಕೆ ‘ಇರುವುದೆಲ್ಲವ ಬಿಟ್ಟು’, ‘ಗಜಾನನ ಗ್ಯಾಂಗ್’ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ಆಯ್ಕೆ ಆಗಿದ್ದಾರೆ. ಬ್ರಹ್ಮಗಂಟು ಸೀರಿಯಲ್ ನಲ್ಲಿ ನಟಿಸಿದ್ದ ಪ್ರಣತಿ ಜಸ್ಟ್ ಪಾಸ್ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ಜಸ್ಟ್ ಪಾಸ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಅರ್ಪಿತಾ, ಚಂದು ಶ್ರೀ, ಯಶಿಕಾ, ವಿಶ್ವಾಸ್, ನಿಖಿಲ್, ಗಗನ್, ಅಭಿ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಾಹಣ ಚಿತ್ರಕ್ಕಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!