d boss ಕಿಚ್ಚಗೆ ಧನ್ಯವಾದ ಹೇಳಿದ ಡಿ ಬಾಸ್

ಕ್ರಾಂತಿ ಚಿತ್ರದ ಹಾಡು ಬಿಡುಗಡೆ ವೇಳೆ ನಡೆದ ಕಹಿ ಘಟನೆ ಬಗ್ಗೆ ನಟ ಸುದೀಪ್ ಸುದೀರ್ಘ ಪತ್ರ ಬರೆದು, ದರ್ಶನ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಇದೀಗ ದರ್ಶನ್ ಅವರು ಕಿಚ್ಚ ಅವರಿಗೆ ಧನ್ಯವಾದ ಹೇಳಿದ್ದಾರೆ.

” ಸುದೀಪ್ ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು” ಎಂದು ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದೀಪ್ ಬೆಂಬಲದ ಮಾತುಗಳಿಗೆ ದರ್ಶನ್ ಪ್ರತಿಕ್ರಿಯಿಸುತ್ತಿದ್ದಂತೆ ಇಬ್ಬರ ಅಭಿಮಾನಿಗಳು ಖುಷಿಯಾಗಿದ್ದಾರೆ. ಕೆಲವೇ ನಿಮಿಷಗಳಲ್ಲಿ ಈ ರಿಪ್ಲೇ ಟ್ವೀಟ್ 9 ಸಾವಿರಕ್ಕೂ ಅಧಿಕ ರೀಟ್ವೀಟ್, ಸಾವಿರಕ್ಕೂ ಅಧಿಕ ಕಾಮೆಂಟ್ ಹಾಗೂ 25 ಸಾವಿರಕ್ಕೂ ಅಧಿಕ ಲೈಕ್ಸ್ ಗಿಟ್ಟಿಸಿಕೊಂಡಿದೆ.

ಕಿಚ್ಚ ಸುದೀಪ್ ಹೊಸಪೇಟೆ ಘಟನೆ ಕುರಿತು ಸುದೀರ್ಘ ಪತ್ರ ಬರೆದಿದ್ದರು. ಅದರಲ್ಲೂ ಮುಖ್ಯವಾಗಿ “ದರ್ಶನ್ ಮತ್ತು ಪುನೀತ್ ಅಭಿಮಾನಿಗಳಲ್ಲಿ ಕೆಲವೊಂದು ವಿಷಗಳಿಗೆ ಅಸಮಾಧಾನ ಇದೆ ಎನ್ನುವುದು ನನಗೆ ಗೊತ್ತು. ಆದರೆ ಪುನೀತ್ ಅವರು ಕೂಡ ಇಂತಹ ಘಟನೆ ಒಪ್ಪುತ್ತಿರಲಿಲ್ಲ ಮತ್ತು ಸಹಕರಿಸುತ್ತಿರಲಿಲ್ಲ. ಯಾಕೆಂದರೆ ಅವರು ಎಲ್ಲರನ್ನು ಗೌರವಿಸುತ್ತಿದ್ದರು. ದರ್ಶನ್ ಅವರು ಕನ್ನಡ ಚಿತ್ರರಂಗಕ್ಕೆ ಮತ್ತು ಭಾಷೆಗೆ ಅಪಾರ ಕೊಡುಗೆ ನೀಡಿದ್ದಾರೆ. ನಮ್ಮ ನಡುವೆ ಏನೇ ಭಿನ್ನಾಭಿಪ್ರಾಯ ಇರಬಹುದು. ನನ್ನ ಮನಸ್ಸಿನಲ್ಲಿ ಇರುವುದನ್ನು ನಾನು ಹೇಳಲೇಬೇಕು. ನಿಜಕ್ಕೂ ಈ ಘಟನೆ ನನ್ನನ್ನು ವಿಚಲಿತನನನ್ನಾಗಿ ಮಾಡಿದೆ” ಎಂದು ಬರೆದುಕೊಂಡಿದ್ದರು.

ಸುದೀಪ್ ಬೆಂಬಲದ ಮಾತುಗಳಿಗೆ ದರ್ಶನ್ ಧನ್ಯವಾದ ತಿಳಿಸುತ್ತಿದ್ದಂತೆ ನಟ ಜಗ್ಗೇಶ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇಬ್ಬರು ಆದಷ್ಟು ಬೇಗ ವೈಮನಸ್ಸು ಬಿಟ್ಟು ಒಂದಾಗಿ ಎಂದು ಸಲಹೆ ನೀಡಿದ್ದಾರೆ.

ಕೆಲ ವರ್ಷಗಳ ಹಿಂದೆ ಸುದೀಪ್ ಹಾಗೂ ದರ್ಶನ್ ವೈಮನಸ್ಸಿನಿಂದ ದೂರವಾಗಿದ್ದರು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!