ganesh ಮಾ.17ಕ್ಕೆ ಬಾನದಾರಿಯಲ್ಲಿ

ಗಣೇಶ್ ಮತ್ತು ನಿರ್ದೇಶಕ ಪ್ರೀತಂ ಗುಬ್ಬಿ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಬಾನದಾರಿಯಲ್ಲಿ ಚಿತ್ರದ ಬಿಡುಗಡೆ ದಿನಾಂಕ ಅಂತಿಮಗೊಂಡಿದೆ.

ಛಾಯಾಗ್ರಾಹಕಿ ಪ್ರೀತಾ ಜಯರಾಮ್ ಬರೆದಿರುವ ರೊಮ್ಯಾಂಟಿಕ್ ಡ್ರಾಮಾ ಮಾರ್ಚ್ 17 ರಂದು ತೆರೆಗೆ ಬರಲಿದೆ. ಗಣೇಶ್ ಜೊತೆ ರುಕ್ಮಿಣಿ ವಸಂತ್ ಮತ್ತು ರೀಷ್ಮಾ ನಾಣಯ್ಯ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರ ಶ್ರೀ ವಾರೆ ಟಾಕೀಸ್ ಬ್ಯಾನರ್ ನಲ್ಲಿ ನಿರ್ಮಾಣವಾಗಿದೆ.

ಬಿಡುಗಡೆ ದಿನಾಂಕವನ್ನು ಪ್ರಕಟಿಸಿರುವ ನಿರ್ದೇಶಕ ಪ್ರೀತಂ, ಚಿತ್ರವು ಪ್ರೇಮಕಥೆಯಲ್ಲ. ಪ್ರೀತಿಯ ಕುರಿತಾದ ಕಥೆ ಎಂದು ಹೇಳಿದ್ದಾರೆ.

ಬಾನದಾರಿಯಲ್ಲಿ ಗಣೇಶ್ ಅವರು ಕ್ರಿಕೆಟಿಗನಾಗಿ, ರುಕ್ಮಿಣಿ ಸರ್ಫರ್ ಆಗಿ ಮತ್ತು ರೀಷ್ಮಾ ವನ್ಯಜೀವಿ ಛಾಯಾಗ್ರಾಹಕಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ.

ಚಿತ್ರದ ಪೋಸ್ಟರ್ ಗಳು ಪ್ರೇಕ್ಷಕರ ಕುತೂಹಲವನ್ನು ಈಗಾಗಲೇ ಕೆರಳಿಸಿದೆ. ಚಿತ್ರಕ್ಕೆ ಅಭಿಲಾಷ್ ಕಲತಿಯವರ ಛಾಯಾಗ್ರಹಣವಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ದೀಪು ಎಸ್ ಕುಮಾರ್ ಅವರ ಸಂಕಲನವಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!