keerthi ಶರಣ್ ಕುಟುಂಬದ ಮತ್ತೊಂದು ಕುಡಿ ನಟನೆಗೆ

ನಟ ಶರಣ್ ಅವರ ಸಹೋದರಿ ಮಗಳು ಸಿನಿಮಾಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ಉಷಾ ಕೃಷ್ಣ ಅವರ ಮಗಳು ಕೀರ್ತಿ ಕೃಷ್ಣ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕೀರ್ತಿ, ಧರಣಿ ಎಂಬ ಸಿನಿಮಾ ಮೂಲಕ ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ. ಮನೋಜ್ ನಾಯಕನಾಗಿ ನಟಿಸುತ್ತಿರುವ ಧರಣಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದೆ.

ಅನಂತು ವರ್ಸಸ್ ನುಸ್ರತ್ ಖ್ಯಾತಿಯ ಸುಧೀರ್ ಶಾನುಭೋಗ್ ಧರಣಿ ಚಿತ್ರವನ್ನು ನಿರ್ದೇಶನ ಮಾಡ್ತಾ ಇದ್ದಾರೆ. ಇನ್ನು ಜಿ.ಕೆ.ಉಮೇಶ್ ಕೆ. ಗಣೇಶ್ ಐತಾಳ್ ಅವರು ನಿರ್ಮಿಸುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ನೀಡಿದರೆ, ಅರುಣ್ ಸುರೇಶ್ ಛಾಯಾಗ್ರಹಣ ಮಾಡಿದ್ದಾರೆ.

ಅರುಣೋದಯ ಕಥೆ , ಶ್ರೀನಿಧಿ ಡಿ ಎಸ್ ಸಂಭಾಷಣೆ ಹಾಗೂ ಡಾ. ವಿ.ನಾಗೇಂದ್ರ ಪ್ರಸಾದ್ ಹಾಗೂ ಶಿವಕುಮಾರ್ ಮಾವಲಿ ಸಾಹಿತ್ಯ, ಟೈಗರ್ ಶಿವು ಸಾಹಸ ಸಂಯೋಜನೆ ಇದೆ. ಪೋಸ್ಟರ್ ನಿಂದ ಈ ಸಿನಿಮಾ ಕುತೂಹಲ ಕೆರಳಿಸಿದೆ.

ಶರಣ್ ಪುತ್ರ ಗುರು ಶಿಷ್ಯರು ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗಕ್ಕೆ ಪ್ರವೇಶ ಪಡೆಯುತ್ತಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!