ಮಾ.3ಕ್ಕೆ ‘ದೂರದರ್ಶನ’ಚಿತ್ರ ಬಿಡುಗಡೆ

ಸುಕೇಶ್ ಶೆಟ್ಟಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ದೂರದರ್ಶನ’ ಸಿನಿಮಾ ಸ್ಯಾಂಡಲ್ ವುಡ್ ಅಂಗಳದಲ್ಲಿ ನಿರೀಕ್ಷೆ ಹುಟ್ಟಿಸಿದೆ. ಮಾರ್ಚ್ 3ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಚಿತ್ರದಲ್ಲಿ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಹಾಗೂ ಅಯಾನ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಡ್ರಾಮಾ ಹಾಗೂ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಾಯಕನಾಗಿ ಅಭಿನಯಿಸಿರುವ ಅಶ್ವಿನ್, ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿರುವ ಧನುಶ್ರೀ ಮತ್ತು ಗೆಳತಿಯಾಗಿ ನಟಿಸಿರುವ ನಿಶಾ ಹೆಗಡೆ ತಮ್ಮ ತಮ್ಮ ಅನಿಸಕೆಗಳನ್ನು ಹಂಚಿಕೊಂಡರು.
ಉಳಿದಂತೆ ಈ ಚಿತ್ರದಲ್ಲಿ ಕೈಲಾಸ್‌ ಪಾಲ್, ಕೆ.ಎಸ್‌.ಜಿ.ವೆಂಕಟೇಶ್, ವಿಂಧುಜ, ಮಲ್ಲುಜಮಖಂಡಿ, ಮಮತಾ ಮುಂತಾದವರು ಅಭಿನಯಿಸಿದ್ದಾರೆ. ಯೌವನಕ್ಕೆ ಬಂದು ಬದುಕು ಏನು ಎಂಬುದನ್ನು ಅರಿತುಕೊಳ್ಳುವಾಗ ಪ್ರೀತಿ ಹುಟ್ಟಿಕೊಳ್ಳುತ್ತದೆ. ಅಲ್ಲಿಂದ ನಮ್ಮ ಪಯಣ ಏನು ಬೇಕಾದರೂ ಆಗಬಹುದು. ಕೊನೆಗೆ ವಿಷಯಗಳನ್ನು ತಿಳಿದುಕೊಂಡಾಗ ಪ್ರತಿಯೊಬ್ಬರಿಗೂ ಹೌದು ಅನಿಸುತ್ತದೆ. ಹಾಗೆಯೇ ಎಲ್ಲರ ಮನಸ್ಸನ್ನು ಗೆಲ್ಲುತ್ತದೆ. ಅವನು ಪ್ರೀತಿಯಲ್ಲಿ ಮೋಸ ಹೋದರೆ, ಅವಳು ಜೀವನದಲ್ಲಿ ನಂಬಿಕೆಯನ್ನು ಕಳೆದುಕೊಂಡಿರುತ್ತಾಳೆ. ಇಬ್ಬರು ವಿಚಿತ್ರ ಸಂದರ್ಭದಲ್ಲಿ ಭೇಟಿಯಾಗುತ್ತಾರೆ. ಇಂತಹ ಆಸಕ್ತಿಕರ ಅಂಶಗಳು ಸಿನಿಮಾದಲ್ಲಿದೆ ಎಂದು ನಿರ್ದೇಶಕ ಪ್ರವೀಣ್‌ ಸುತರ್ ಚಿತ್ರದ ಕುರಿತಂತೆ ಮಾಹಿತಿ ಹಂಚಿಕೊಂಡರು.

ಏಳು ಹಾಡುಗಳಿಗೆ ಆಕಾಶ್‌ ಜಾದವ್ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ವಿನೋದ್ ಮಂಡ್ಯ, ಸಂಭಾಷಣೆ ವಿಜಿಯೇಂದ್ರ ಜೋಡಿದಾರ್, ಸಂಕಲನ ರಾಜ್‌ ಶಿವು ಅವರದಾಗಿದೆ. ಚಿಕ್ಕಮಗಳೂರು, ಮಂಗಳೂರು, ಕೇರಳ ಕಡೆಗಳಲ್ಲಿ ಚಿತ್ರೀಕರಣ ನಡೆದಿದೆ. ಸಚಿತ್ ಫಿಲಿಂ ಮುಖಾಂತರ ವಿತರಕ ವೆಂಕಟ್ ಸುಮಾರು 80ಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ಈ ವಾರ ಬಿಡುಗಡೆಯಾಗುತ್ತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!