Chiru: ಏಪ್ರಿಲ್ ನಲ್ಲಿ ʻರಾಜಮಾರ್ತಾಂಡʼ ತೆರೆಗೆ

ಚಿರಂಜೀವಿ ಸರ್ಜಾ ಅಭಿನಯದ ʻರಾಜಮಾರ್ತಾಂಡʼ ಚಿತ್ರ ಏಪ್ರಿಲ್ ನಲ್ಲಿ ಬಿಡುಗಡೆ ಆಗಲಿದೆ.

ಚಿರಂಜೀವಿ ಸರ್ಜಾ “ರಾಜಮಾರ್ತಂಡ” ಚಿತ್ರದಲ್ಲಿ ಚಿರು ನಾಯಕರಾಗಿ ಅಭಿನಯಿಸಿದ್ದರು. ಚಿತ್ರೀಕರಣ ಕೂಡ ಮುಕ್ತಾಯವಾಗಿತ್ತು. ಡಬ್ಬಿಂಗ್ ಮುಗಿಸಬೇಕು ಎನ್ನುವ ವೇಳೆ ಅವರು ನಿಧನರಾಗಿದ್ದರು. ಈಗ ಕುಟುಂಬದವರ ಸಹಕಾರದೊಂದಿಗೆ ಚಿತ್ರ ಬಿಡುಗಡೆಗೆ ಸಿದ್ಧ ಆಗುತ್ತಿದೆ.

ಅಣ್ಣನ ಪಾತ್ರಕ್ಕೆ ಧ್ರುವ ಸರ್ಜಾ ಡಬ್ಬಿಂಗ್ ಮಾಡಿದ್ದಾರೆ. ಡಬ್ಬಿಂಗ್ ವೇಳೆ ಅಣ್ಣನ ನೆನೆದು ಧ್ರುವ ಭಾವುಕರಾಗಿದ್ದರು. ಈಗ ಚಿತ್ರಕ್ಕೆ ಡಿ.ಟಿ.ಎಸ್ ಅಳವಡಿಸಲಾಗುತ್ತಿದ್ದು ಏಪ್ರಿಲ್ ನಲ್ಲಿ ಚಿತ್ರ ತೆರೆಗೆ ಬರಲಿದೆ.

“ರಾಜಮಾರ್ತಾಂಡ” ಚಿತ್ರದ ನಿರ್ಮಾಪಕ ಶಿವಕುಮಾರ್ . ನಿರ್ದೇಶಕ ಕೆ. ರಾಮನಾರಾಯಣ್. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ನೃತ್ಯ ನಿರ್ದೇಶನ ಚಿತ್ರಕ್ಕಿದೆ.

ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ತಾರಾಬಳಗದಲ್ಲಿದ್ದಾರೆ.
——-

Be the first to comment

Leave a Reply

Your email address will not be published. Required fields are marked *

Translate »
error: Content is protected !!