Sudeep: ಕಿಚ್ಚ ಸುದೀಪ್ ರಾಜಕೀಯಕ್ಕೆ ಕರೆತರಲು ಯತ್ನ

ವಿಧಾನಸಭಾ ಚುನಾವಣೆಯ ಬಿಸಿ ಜೋರಾಗಿರುವ ಬೆನ್ನಲ್ಲೇ ಕಿಚ್ಚ ಸುದೀಪ್‌ ಅವರನ್ನು ರಾಜಕೀಯಕ್ಕೆ ಕರೆತರಲು ಪ್ರಯತ್ನಗಳು ನಡೆದಿವೆ.

ನಟ ಕಿಚ್ಚ ಸುದೀಪ್ ಅವರಿಗೆ ಹಲವು ಪ್ರಮುಖ ಮುಖಂಡರ ಜೊತೆ ಒಡನಾಟ ಇದೆ. ಮೂಲಗಳ ಪ್ರಕಾರ ಸುದೀಪ್ ಬಿಜೆಪಿ ಜೊತೆ ಕೈ ಜೋಡಿಸುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಶೀಘ್ರದಲ್ಲೇ ಸ್ಪಷ್ಟ ಚಿತ್ರಣ ಸಿಗಲಿದೆ.

ಸುದೀಪ್​ ಅವರು ನೇರವಾಗಿ ರಾಜಕೀಯಕ್ಕೆ ಧುಮುಕುತ್ತಾರೋ ಅಥವಾ ಕೇವಲ ಬಿಜೆಪಿ ಪರವಾಗಿ ಪ್ರಚಾರ ರಾಯಭಾರಿ ಆಗುತ್ತಾರೋ ಎನ್ನುವುದು ಏಪ್ರಿಲ್​ 5ರಂದು ಬಹಿರಂಗ ಆಗಲಿದೆ ಎಂದು ಹೇಳಲಾಗಿದೆ.

ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್​. ಯಡಿಯೂರಪ್ಪ ಜೊತೆ ಕಿಚ್ಚ ಸುದೀಪ್ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಸುದೀಪ್​ ಅವರಿಂದ ಬೆಂಬಲ ಪಡೆಯಬೇಕು ಎಂಬುದು ಕಾಂಗ್ರೆಸ್​ ಮತ್ತು ಬಿಜೆಪಿಯ ಉದ್ದೇಶ ಆಗಿತ್ತು. ಪಕ್ಷಕ್ಕೆ ಸೇರ್ಪಡೆ ಆಗುವಂತೆ ಎರಡೂ ಕಡೆಯಿಂದ ಅವರಿಗೆ ಆಹ್ವಾನ ನೀಡಲಾಗಿತ್ತು.

ಸುದೀಪ್​ ಅವರು ಬಿಜೆಪಿ ಪರ ಆಸಕ್ತಿ ತೋರಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಸುದ್ದಿ ಹೊರ ಬಿದ್ದಿದೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!