ತೆರೆಗೆ ಬರಲು ಸಿದ್ದವಾದ “ಪ್ರೆಸೆಂಟ್ ಪ್ರಪಂಚ ೦% ಲವ್”

ಯುವ ತಂಡದ “ಪ್ರೆಸೆಂಟ್ ಪ್ರಪಂಚ 0% ಲವ್” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.

ಈ ಚಿತ್ರವನ್ನು ಕೃಷ್ಣಮೂರ್ತಿ ಹಾಗೂ ರವಿಕುಮಾರ್ ಇಬ್ಬರು ಸೇರಿ ನಿರ್ಮಿಸಿದ್ದಾರೆ. ನಾಗರಾಜ್ ಹೊಸಳ್ಳಿ ಹಾಗೂ ದೇವರಾಜ್ ಅವರ ಸಹ ನಿರ್ಮಾಣ ಇದೆ.

ವಿಧಿ, ಚಿತ್ರ ಬಿಡುಗಡೆಗೆ ಮುನ್ನವೇ ನಿರ್ದೇಶಕ ಅಭಿರಾಮ್ ಹಾಗೂ ನಾಯಕ ಅರ್ಜುನ್ ಮಂಜುನಾಥ್ ಇಬ್ಬರನ್ನು ಬಲಿ ತೆಗೆದುಕೊಂಡಿತು. ಅವರಿಬ್ಬರು ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಗಿಯುವ ತನಕ ಜೊತೆಗಿದ್ದರು. ಆಮೇಲೆ ಯಾರು ನಿರೀಕ್ಷಿಸದ್ದು ನಡೆದು ಹೋಯಿತು. ದ್ವಿತೀಯ ನಾಯಕ ಯಶಸ್ ಅಭಿ ಸೇರಿದಂತೆ ಚಿತ್ರತಂಡದ ಸದಸ್ಯರ ಸಹಕಾರದಿಂದ ಸಿನಿಮಾ ಪೂರ್ಣವಾಗಿದೆ. ಸದ್ಯದಲ್ಲೇ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ನಿರ್ಮಾಪಕ ಕೃಷ್ಣಮೂರ್ತಿ ಕೆ.ಎಲ್ ಹೇಳಿದ್ದಾರೆ.

“ಪ್ರೆಸೆಂಟ್ ಪ್ರಪಂಚ”ದಲ್ಲಿ ಎಲ್ಲದಕ್ಕಿಂತ ಪ್ರೀತಿನೇ ಮುಖ್ಯ ಎಂಬುದೇ ಚಿತ್ರದ ಪ್ರಮುಖ ಕಥಾಹಂದರ. ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕ ೦% ಪ್ರೀತಿ ಎಂದುಕೊಂಡು ಬಂದರೆ, ಹೋಗುವಾಗ 100% ಪ್ರೀತಿ ಹೊತ್ತಿಕೊಂಡು ಹೋಗುವುದು ಖಚಿತ. ನಾಯಕ ಹಾಗೂ ನಿರ್ದೇಶಕರ ನಿಧನದಿಂದ ನಮ್ಮ ತಂಡಕ್ಕೆ ತುಂಬಾ ಆಘಾತವಾಗಿತ್ತು. ಈ ಚಿತ್ರ ಅವರಿಬ್ಬರ ಕನಸಿನ ಕೂಸು. ಚಿತ್ರವನ್ನು ಪೂರ್ತಿ ಮಾಡಿ ತೆರೆಗೆ ತರೋಣ ಎಂದು ನಾನು ನಿರ್ಮಾಪಕರಿಗೆ ಹೇಳಿದೆ ಎಂದು ದ್ವಿತೀಯ ನಾಯಕ ಯಶಸ್ ಅಭಿ ತಿಳಿಸಿದ್ದಾರೆ.

ಮದುವೆಯಾದ ಮೇಲೆ ಗಂಡ – ಹೆಂಡತಿ ನಡುವೆ ಭಿನ್ನಾಭಿಪ್ರಾಯಗಳು ಬರುವುದು ಸಹಜ. ಅದು ವಿಚ್ಛೇದನದ ತನಕ ಹೋಗಬಾರದು ಎಂಬುದನ್ನು ನಮ್ಮ ಚಿತ್ರದಲ್ಲಿ ತೋರಿಸಲಾಗಿದೆ ಎಂದು ನಾಯಕಿ ಸಂಭ್ರಮ ಶ್ರೀ ಹೇಳಿದ್ದಾರೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!