Pawan Kalyan: ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಪವನ್ ಕಲ್ಯಾಣ್

ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಆಂಧ್ರದಲ್ಲಿ ಸಿನಿಮಾ ಜೊತೆಗೆ ತಮ್ಮದೇ ಪಕ್ಷ ಕಟ್ಟಿಕೊಂಡು ರಾಜಕೀಯದಲ್ಲೂ ತೊಡಗಿಸಿಕೊಂಡಿರುವ ಪವನ್ ಕಲ್ಯಾಣ್ ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.

ಇದೇ ಅಭ್ಯರ್ಥಿ ಪರ ಕಿಚ್ಚ ಸುದೀಪ್ ಕೂಡಾ ಪ್ರಚಾರ ನಡೆಸಲಿದ್ದಾರೆ. ಹೀಗಾಗಿ ಕಿಚ್ಚ-ಪವನ್ ಕಲ್ಯಾಣ್ ಜೊತೆಯಾಗಿ ಪ್ರಚಾರ ನಡೆಸಿದರೂ ಅಚ್ಚರಿಯಿಲ್ಲ ಎನ್ನುವ ಮಾತು ಕೇಳಿ ಬಂದಿದೆ.

ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ್ ಗೆ ಕರ್ನಾಟದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಪವನ್​ ಕಲ್ಯಾಣ್​ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಕಳೆದ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಪವನ್ ಕಲ್ಯಾಣ್ ಈ ಭಾಗದಲ್ಲಿ ಕೆಲವರ ಪರವಾಗಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದರು. ಈ ಬಾರಿಯೂ ಪವನ್ ಕಲ್ಯಾಣ್ ಚುನಾವಣೆ ಪ್ರಚಾರಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ, ಪವನ್ ಕಲ್ಯಾಣ್ ಅವರಿಗೆ ಆತ್ಮೀಯರಾಗಿದ್ದಾರೆ. ಇತ್ತೀಚೆಗೆ ಸಂದರ್ಶನದಲ್ಲಿಸಿಕ್ಕಲ್ ರಾಮಚಂದ್ರ ಗೌಡ, ಪವನ್ ಕಲ್ಯಾಣ್ ನನ್ನ ಪರವಾಗಿ ಪ್ರಚಾರಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು.

ಈ ಬಾರಿ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಪರ ಕಿಚ್ಚ ಸುದೀಪ್ ಈಗಾಗಲೇ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!