Niveditha: ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶಿವಣ್ಣ ಪುತ್ರಿ

ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಕೂಡ ಚಿತ್ರರಂಗಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ.

ಶಿವಣ್ಣ ಅವರ ದ್ವಿತೀಯ ಪುತ್ರಿ ನಿವೇದಿತಾ ತಮ್ಮದೇ ಒಡೆತನದ ನಿರ್ಮಾಣ ಸಂಸ್ಥೆಯಡಿ ಚೊಚ್ಚಲ ಚಿತ್ರದ ನಿರ್ಮಾಣಕ್ಕಿಳಿದಿದ್ದಾರೆ.

ಶ್ರೀ ಮುತ್ತು ಸಿನಿ ಸರ್ವಿಸ್ ನಿವೇದಿತಾ ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ವೇದಿಕೆ ನೀಡಲೆಂದು ಸೃಷ್ಟಿಯಾಗಿರುವ ನಿರ್ಮಾಣ ಸಂಸ್ಥೆ. ಈ ಸಂಸ್ಥೆಯಡಿ ಈಗಾಗಲೇ ಧಾರಾವಾಹಿ- ಮೂರು ವೆಬ್ ಸೀರೀಸ್‌ಗಳು ಹೊರ ಬಂದಿವೆ. ಈಗ ಈ ಬ್ಯಾನರ್ ನಲ್ಲಿ ನಿವೇದಿತಾ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಹೊಂಬಿಸಿಲ ಕಿರಣಗಳಲ್ಲಿ ತಂಗಾಳಿಯೊಂದು ಮೂಡಿದೆ. ಹುಟ್ಟು ಸಾವಿನ ಸ್ವಾರಸ್ಯವನ್ನು ಅನ್ವೇಷಿಸಲು ಹೊರಟಿದೆ. ಮೇ 1ರಂದು ಒಂದು ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ ಎಂಬ ಪೋಸ್ಟರ್ ಮೂಲಕ ತಮ್ಮ ಹೊಸ ಹೆಜ್ಜೆಯ ಬಗ್ಗೆ ತಿಳಿಸಿದ್ದಾರೆ.

ನಿವೇದಿತಾ ಒಡೆತನದ ಶ್ರೀ ಮುತ್ತು ಸಿನಿ ಸರ್ವಿಸ್ ನಡಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾಗೆ ವಂಶಿ ಸಾರಥಿ ಆಗಿದ್ದಾರೆ. ಈ ಹಿಂದೆ ‘ಮಾಯಾಬಜಾರ್’ ಸಿನಿಮಾದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು. ಇತ್ತೀಚೆಗೆ ತೆರೆಗೆ ‘ಪೆಂಟಗನ್’ ಸಿನಿಮಾದ ಕಿರಣ್ ಕುಮಾರ್ ನಿರ್ದೇಶಕದ ಕಥೆಯಲ್ಲಿ ಪ್ರಮುಖ ಪಾತ್ರವಾಗಿ ನಟಿಸಿದ್ದರು.

ನಿವೇದಿತಾ ಬಂಡವಾಳ ಹಾಕುತ್ತಿರುವ ಮೊದಲ ಚಿತ್ರಕ್ಕೆ ವಂಶಿ ಆಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಗೀತಾ ಪಿಕ್ಚರ್ಸ್ ನಡಿ ಗೀತಾ ಶಿವರಾಜ್ ಕುಮಾರ್ ನಿರ್ಮಾಪಕಿ ಆಗಿದ್ದಾರೆ. ಈಗ ತಾಯಿಯ ಹಾದಿಯಲ್ಲಿ ನಿವೇದಿತಾ ಹೆಜ್ಜೆ ಹಾಕಿದ್ದಾರೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!