ಗನ್ಸ್ ಅಂಡ್ ರೋಸಸ್ : ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ ಸ್ಯಾಂಡಲ್‌ವುಡ್‌ಗೆ ಪ್ರವೇಶ

ಸುಮಾರು ವರ್ಷಗಳಿಂದ ಕನ್ನಡದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ” ಗನ್ಸ್ ಅಂಡ್ ರೋಸಸ್” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರರಂಗದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಹೆಚ್ ಆರ್ ನಟರಾಜ್, ನಾನು ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ‌. ಬಿಲ್ಡರ್ ಕೂಡ. ನಿರ್ದೇಶಕ ಶ್ರೀನಿವಾಸಮೂರ್ತಿ ನನ್ನ ಸ್ನೇಹಿತರು. ಅವರು ಈ ಚಿತ್ರದ ಬಗ್ಗೆ ನನ್ನ ಬಗ್ಗೆ ಹೇಳಿದಾಗ ನಿರ್ಮಾಣಕ್ಕೆ ಮುಂದಾದೆ. ಆದರೆ ನಾನು ಒಂದು ಕಂಡೀಶನ್ ಹಾಕಿದ್ದೇನೆ. ಚಿತ್ರ ನಿಗದಿತ ಸಮಯಕ್ಕೆ ಮುಗಿಯಬೇಕು ಎಂದು. ಅಂದುಕೊಂಡಂತೆ ಆದರೆ, ಈ ವರ್ಷದ ಕೊನೆಗೆ ಚಿತ್ರ ತೆರೆಗೆ ಬರಲು ಸಿದ್ದವಾಗಿರುತ್ತದೆ ಎಂದರು.

ನಾನು ಸಾಕಷ್ಟು ವರ್ಷಗಳಿಂದ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಇದು ಮೊದಲ ನಿರ್ದೇಶನದ ಚಿತ್ರ‌. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಈ ಚಿತ್ರದ ಮೂಲಕ ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಯಶ್ವಿಕ ನಿಷ್ಕಲ ಈ ಚಿತ್ರದ ನಾಯಕಿ. ಶಶಿಕುಮಾರ್ ಸಂಗೀತ ನೀಡುತ್ತಿದ್ದಾರೆ. ಜನಾರ್ದನ್ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದ್ದು, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಶರತ್ ಬರೆದಿದ್ದಾರೆ ಎಂದು ನಿರ್ದೇಶಕ ಶ್ರೀನಿವಾಸ್ ಕುಮಾರ್ ತಿಳಿಸಿದರು.

ಇದು ನನ್ನ ಚೊಚ್ಚಲ ಚಿತ್ರ ಹಾಗೂ ಪತ್ರಿಕಾಗೋಷ್ಠಿ. ಈ ಸಿನಿಮಾ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದೇನೆ‌. ಕಥೆ ಹಾಗೂ ನನ್ನ ಪಾತ್ರ ಚೆನ್ನಾಗಿದೆ ಎಂದರು ನಾಯಕ ಅರ್ಜುನ್.
ನಾಯಕಿ ಯಶ್ವಿಕ ನಿಷ್ಕಲ ತಮ್ಮ ಪಾತ್ರದ ಕುರಿತು ಮಾತನಾಡಿದರು.

“ಗನ್ಸ್ ಅಂಡ್ ರೋಸಸ್” ಚಿತ್ರದಲ್ಲಿ ಅಂಡರ್ ವಲ್ಡ್ ಹಾಗೂ ಪ್ರೇಮಕಥೆ ಎರಡು ಇರುತ್ತದೆ ಎಂದರು ಕಥೆ ಬರೆದಿರುವ ಶರತ್.

ಈ ಚಿತ್ರದ ಮೂಲಕ ನನ್ನ ಮಗ ನಾಯಕನಾಗುತ್ತಿದ್ದೇನೆ. ಸಾಕಷ್ಟು ವರ್ಷಗಳಿಂದ ನನಗೆ ತಾವೆಲ್ಲರು ಪ್ರೋತ್ಸಾಹ ನೀಡಿದ್ದೀರಿ. ನನ್ನ ಮಗನಿಗೂ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ಅಜಯ್ ಕುಮಾರ್.

ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು, ಸಂಗೀತ ನಿರ್ದೇಶಕ ಶಶಿಕುಮಾರ್, ಛಾಯಾಗ್ರಹಕ ಜನಾರ್ದನ್ ಮಾತ್ತು ನಟರಾದ ಜೀವನ್ ರಿಚಿ ಹಾಗೂ ಹರೀಶ್ ಚಿತ್ರದ ಕುರಿತು ಮಾತನಾಡಿದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!