Rajamarthanda: ‘ರಾಜಮಾರ್ತಾಂಡ’ ರಿಲೀಸ್ ಡೇಟ್ ಫಿಕ್ಸ್

ಚಿರು ಸರ್ಜಾ ನಟನೆಯ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ ಧ್ರುವ ಸರ್ಜಾ ಹುಟ್ಟು ಹಬ್ಬದಂದು ರಿಲೀಸ್ ಆಗಲಿದೆ.

ಚಿರಂಜೀವಿ ಸರ್ಜಾ ಅವರು ನಿಧನರಾಗಿ ಕೆಲ ವರ್ಷಗಳು ಕಳೆದಿವೆ. ಚಿರಂಜೀವಿ ಸರ್ಜಾ ನಿಧನದ ಮುನ್ನ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ ಚಿತ್ರದ ಶೂಟಿಂಗ್ ಪೂರ್ಣಗೊಂಡಿತ್ತು. ಆದರೆ ಡಬ್ಬಿಂಗ್ ಕೆಲಸಗಳು ಆಗಿರಲಿಲ್ಲ. ಚಿರು ಪಾತ್ರಕ್ಕೆ ಧ್ರುವ ಸರ್ಜಾ ಅವರು ಧ್ವನಿ ನೀಡಿದ್ದಾರೆ. ಈ ಸಿನಿಮಾದ ರಿಲೀಸ್ ದಿನಾಂಕ ಕಾರಣಾಂತರಗಳಿಂದ ಮುಂದೂಡಲ್ಪಡುತ್ತಲೇ ಇತ್ತು. ಈಗ ಸಿನಿಮಾಗೆ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ.

ಅಕ್ಟೋಬರ್ 6 ಧ್ರುವ ಸರ್ಜಾ ಜನ್ಮದಿನ ಆಗಿದೆ. ಅಂದು ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಧ್ರುವ ಸರ್ಜಾ ಖುಷಿಯಾಗಿದ್ದು, ಚಿತ್ರತಂಡದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

‘ರಾಜಮಾರ್ತಾಂಡ’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಬಣ್ಣ ಹಚ್ಚಿದ್ದಾರೆ. ಚಿಕ್ಕಣ್ಣ, ಭಜರಂಗಿ ಲೋಕಿ, ದೇವರಾಜ್, ಶಂಕರ್ ಅಶ್ವಥ್, ಸುಮಿತ್ರ, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಇಲ್ಲಿ ನಟಿಸಿದ್ದಾರೆ.

‘ರಾಜಮಾರ್ತಾಂಡ’ ಚಿತ್ರವನ್ನು ಶಿವಕುಮಾರ್ ನಿರ್ಮಿಸಿದ್ದು, ರಾಮನಾರಾಯಣ್ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಇದೆ. ಧರ್ಮವಿಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ವೆಂಕಟೇಶ್ ಯು.ಡಿ.ವಿ. ಸಂಕಲನ, ಕೆ. ಗಣೇಶ್ ಛಾಯಾಗ್ರಹಣ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಭೂಷಣ್, ಹರ್ಷ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!