Vijayalakshmi: ಬಲವಂತವಾಗಿ ಗರ್ಭಪಾತ: ರಾಜಕಾರಣಿ ವಿರುದ್ಧ ವಿಜಯಲಕ್ಷ್ಮೀ ದೂರು

ನಾಮ್​ ತಮಿಳರ್​ ಕಟ್ಚಿ (ಎನ್​ಟಿಕೆ) ಮುಖಂಡ, ನಟ ಮತ್ತು ನಿರ್ದೇಶಕ ಸೀಮನ್​ ಅವರು ಮದುವೆ ಆಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡು ಬಲವಂತವಾಗಿ 7 ಬಾರಿ ಗರ್ಭಪಾತ ಮಾಡಿಸಿದ್ದಾರೆ ಎಂದು ನಟಿ ವಿಜಯಲಕ್ಷ್ಮೀ ದೂರಿದ್ದು ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸಲಿದ್ದಾರೆ.

ವಿಜಯಲಕ್ಷ್ಮೀ ನೀಡಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ಸೀಮನ್ ಅವರನ್ನು ಚೆನ್ನೈ ಪೊಲೀಸರು ಮಂಗಳವಾರ ವಿಚಾರಣೆ ನಡೆಸಲಿದ್ದಾರೆ.

ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ತನಗೆ ಮೋಸ ಮಾಡಿದ್ದಾನೆ ಎಂದು ಚೆನ್ನೈ ನಗರ ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮೀ ದೂರು ನೀಡಿದ್ದಾರೆ. ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಸೀಮನ್ ಅವರಿಗೆ ಸೂಚಿಸಲಾಗಿದ್ದರೂ, ಕಾರಣಾಂತರಗಳಿಂದ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ಸೀಮಾನ್‌ ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ಪ್ರೀತಿಸುತ್ತಿರುವಂತೆ ನಾಟಕ ಆಡಿ ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ. ಬಲವಂತವಾಗಿ 7 ಬಾರಿ ಗರ್ಭಪಾತ ಮಾಡಿಸಿದ್ಧಾನೆ ಎಂದು ವಿಜಯಲಕ್ಷ್ಮೀ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆ ವಂಚನೆ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ನಿಷೇಧ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸೀಮನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ವಿಜಯಲಕ್ಷ್ಮಿ ಇತ್ತೀಚೆಗೆ ತಿರುವಳ್ಳೂರಿನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದರು.

ಚೆನ್ನೈ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ವಿಜಯಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ತಮಗೆ ಗರ್ಭಪಾತವಾಗಿದೆ ಎಂದು ವಿಜಯಲಕ್ಷ್ಮೀ ಅರೋಪಿಸಿರುವುದರಿಂದ ಸ್ತ್ರೀ ರೋಗ ತಜ್ಞರು ವಿಜಯಲಕ್ಷ್ಮೀ ಅವರಿಗೆ ಅಲ್ಟ್ರಾಸೌಂಡ್ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!