Nagabhushan: ಮತ್ತೆ ಸಂಕಟದಲ್ಲಿ ನಾಗಭೂಷಣ್

ನಟ ನಾಗಭೂಷಣ್ ಅವರ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾದ ಬಗ್ಗೆ ಕೇಸ್ ದಾಖಲಾಗುವ ಸಾಧ್ಯತೆ ಹೆಚ್ಚಾಗಿದೆ.

ನಾಗಭೂಷಣ್ ಕಾರು ಅಪಘಾತಕ್ಕೆ ಒಳಗಾಗಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಪ್ರೇಮಾ ಎನ್ನುವ ಮಹಿಳೆ ಮೃತಪಟ್ಟರು. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಹೀಗಾಗಿ ಬೆಸ್ಕಾಂ ಅಧಿಕಾರಿಗಳು ನಾಗಭೂಷಣ್ ವಿರುದ್ಧ್ ದೂರು ದಾಖಲು ಮಾಡುವ ಸಾಧ್ಯತೆ ಇದೆ. ಕಂಬಕ್ಕೆ ಹಾನಿಯಾದ ಬಗ್ಗೆ ಟ್ರಾಫಿಕ್ ಪೊಲೀಸರು ಬೆಸ್ಕಾಂ ಅಧಿಕಾರಿಗಳಿಗೆ ಈಗಾಗಲೇ ಮಾಹಿತಿ ನೀಡಿದ್ದಾರೆ.

ನಾಗಭೂಷಣ್ ಅವರಿಗೆ ಸ್ಟೇಷನ್ ಬೇಲ್ ನೀಡಿ ಕಳುಹಿಸಲಾಗಿದೆ. ಈಗಾಗಲೇ ಅವರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಇಂದು ನಾಗಭೂಷಣ್ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಈ ವೇಳೆ ಪೊಲೀಸರು ನಾಗಭೂಷಣ್ ಅವರ ಹೇಳಿಕೆ ಪಡೆಯಲಿದ್ದಾರೆ. ಇನ್ನು, ಕಾರಿನ ಐಎಂವಿ ಟೆಸ್ಟ್ ಮಾಡಲು ಆರ್​ಟಿಓ ಅಧಿಕಾರಿಗಳಿಗೆ ಪೊಲೀಸರು ಪತ್ರ ಬರೆದಿದ್ದಾರೆ. ಈ ಮೂಲಕ ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!