Darshan: ದರ್ಶನ್ ವಿರುದ್ಧ ಪೊಲೀಸ್ ದೂರು

ನಟ ದರ್ಶನ್ ತೂಗುದೀಪ ವಿರುದ್ಧ ಸಾಕು ನಾಯಿ ದಾಳಿ ಆರೋಪದ ಮೇರೆಗೆ  ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದರ್ಶನ್ ಮನೆಯ ಸಾಕು ನಾಯಿ ಕಡಿದು ಗಾಯಗೊಳಿಸಿದ ಆರೋಪದ ಮೇರೆಗೆ ಅಮಿತಾ ಜಿಂದಾಲ್ ಎಂಬ ಮಹಿಳೆ ದರ್ಶನ್ ಹಾಗೂ ಇತರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.  ಆರ್​ಆರ್ ನಗರದ ನಿವಾಸದ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆ ನಡೆಯುವ ಮುನ್ನ ದರ್ಶನ್​ ಮನೆ ಸಿಬ್ಬಂದಿ ಮಹಿಳೆಯೊಂದಿಗೆ ವಾಗ್ವಾದ ಮಾಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ದೂರಿನಲ್ಲಿ ಹೇಳಿಕೊಂಡಿರುವಂತೆ ಆರ್​ ಆರ್​ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಮಹಿಳೆ ಆಗಮಿಸಿದ್ದರು. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ತಮ್ಮ ಕಾರನ್ನು ಮಹಿಳೆ ನಿಲ್ಲಿಸಿದ್ದರು. ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವು ಎಂದು ಹೇಳಲಾಗಿದೆ. ದರ್ಶನ್​ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಮಹಿಳೆ ಕೇಳಿದ್ದಾಗ ವಾಗ್ವಾದ ನಡೆಸಿರುವ ದರ್ಶನ್ ಮನೆಯ ಸಿಬ್ಬಂದಿ, ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದಿದ್ದಾರೆ. ಮಹಿಳೆ ಹಾಗೂ ದರ್ಶನ್​ರ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಬಳಿಕ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಚ್ಚಿ ಗಾಯಗೊಳಿಸಿವೆ.

ಅಮಿತಾ ಜಿಂದಾಲ್ ಆರ್​ಆರ್ ನಗರ ಪೊಲೀಸ್ ಠಾಣೆಗೆ ಹೋಗಿ ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಮನೆಯ ಸಿಬ್ಬಂದಿಗಳನ್ನು ಮೊದಲ ಆರೋಪಿ, ದರ್ಶನ್​ ನ್ನು ಎರಡನೇ ಆರೋಪಿಯನ್ನಾಗಿ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!