ಟಿಕೆಟ್ ನೀಡುವಂತೆ ಬೇಡಿಕೆಯಿಟ್ಟ ಸಾಧುಕೋಕಿಲಾ

ಹಾಸ್ಯನಟ, ನಿರ್ದೇಶಕ ಸಾಧುಕೋಕಿಲಾ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿ, ಟಿಕೆಟ್ ನೀಡುವಂತೆ  ಕಾಂಗ್ರೆಸ್ ನಾಯಕರಿಗೆ ಬೇಡಿಕೆಯಿಟ್ಟಿದ್ದಾರೆ.

ಸಾಧುಕೋಕಿಲಾ ಕ್ರಿಶ್ಚಿಯನ್ ಧರ್ಮ ಅನುಸರಿಸುತ್ತಾರೆ. ಇದೇ ಧರ್ಮದವರು ಹೆಚ್ಚಿರುವ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸಾಧುಕೋಕಿಲಾ ಟಿಕೆಟ್ ನೀಡುವಂತೆ ಕಾಂಗ್ರೆಸ್ ನಾಯಕರಿಗೆ ಬೇಡಿಕೆಯಿಟ್ಟಿದ್ದಾರೆ. ಅವಕಾಶ ಕೊಟ್ಟರೆ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸುವುದಾಗಿ ಸಾಧುಕೋಕಿಲಾ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕರ ಸಮಾವೇಶ, ರಾಹುಲ್ ಭಾರತ್ ಝೋಡೋ ಯಾತ್ರೆ ಮಾಡಿದ್ದಾಗ ಸಾಧುಕೋಕಿಲ ಕೂಡಾ ಪಾಲ್ಗೊಂಡಿದ್ದರು. ಬೆಂಗಳೂರು ಸೆಂಟ್ರಲ್ ನಲ್ಲಿ 15 ಲಕ್ಷ ಕ್ರಿಶ್ಚಿಯನ್ ಸಮುದಾಯದವರಿದ್ದು, ಸಾಧುಕೋಕಿಲಾಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬಂದಿದೆ.

ನಾನು ಯಾವುದೇ ಧರ್ಮಕ್ಕೆ ಸೇರಿದವನಾಗಲು ಬಯಸುವುದಿಲ್ಲ. ನಾನು ಎಲ್ಲಾ ಸಮುದಾಯದವರೊಂದಿಗೆ ಗುರುತಿಸಲು ಬಯಸುತ್ತೇನೆ. ನನ್ನ ಹಿನ್ನಲೆ ಎಲ್ಲರಿಗೂ ಗೊತ್ತಿದೆ. ನನ್ನನ್ನು ಎಲ್ಲಾ ಸಮುದಾಯದವರು ಗುರುತಿಸುತ್ತಾರೆ. ಹೀಗಾಗಿ ಟಿಕೆಟ್ ಕೊಟ್ಟರೆ ಸ್ಪರ್ಧಿಸಲು ರೆಡಿ ಎಂದಿದ್ದಾರೆ ಸಾಧುಕೋಕಿಲಾ.

ಸಾಧು ಕೋಕಿಲಾ  ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಮುಂದಿನ ಎರಡು ವರ್ಷಗಳ ಕಾಲ ನೇಮಕಗೊಂಡಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!