ಚಾಲೆಂಜಿಂಗ್ ಸ್ಟಾರ್ ಅರೆಸ್ಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.

ಎರಡು ದಿನಗಳಿಂದ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ದರ್ಶನ್  ವಾಸ್ತವ್ಯ ಹೂಡಿದ್ದರು. ಪ್ರತಿಷ್ಠಿತ ಲಲಿತ್ ಮಹಲ್  ಹೋಟೆಲ್ ನಲ್ಲಿ ದರ್ಶನ್ ಅಭಿನಯದ ಡೆವಿಲ್ ಮೂವಿ ಚಿತ್ರೀಕರಣ ನಡೆಯುತ್ತಿದೆ.  ಡೆವಿಲ್‌ ಸಿನಿಮಾ ಟೀಮ್‌ನಿಂದ ಬುಕ್ ರೂಂ ಆಗಿದ್ದು ಜೂನ್ 9 ರಿಂದ ಖಾಸಗಿ ಹೋಟೆಲ್‌ನಲ್ಲಿ ದರ್ಶನ್ ಉಳಿದುಕೊಂಡಿದ್ದಾರೆ.

ಕಳೆದ ರಾತ್ರಿ ಖಾಸಗಿ ಹೋಟೆಲ್ ನಲ್ಲಿ ದರ್ಶನ್ ತಂಗಿ, ಇಂದು ಬೆಳಿಗ್ಗೆ ಆರು ಗಂಟೆಗೆ ಮೈಸೂರಿನ ಗೋಲ್ಡ್ ಜಿಮ್ ನಲ್ಲಿ ವರ್ಕ್ ಔಟ್ ಮುಗಿಸಿ ಹೊರ ಬಂದಿದ್ದರು. ಈ ವೇಳೆ ಬಾಡಿಗಾರ್ಡ್ ಮೂಲಕ ಕಲ್ಲಂಗಡಿ ಹಣ್ಣಿನ ಜ್ಯೂಸ್ ತರಿಸಿಕೊಂಡು ಕುಡಿದಿದ್ದರು. ಬಳಿಕ ಜಿಮ್ ಬಳಿ ಅಣತಿ ದೂರದಲ್ಲಿರುವ ಹೋಟೆಲ್ ಗೆ ತೆರಳುವ ಮಾರ್ಗ ಮಧ್ಯೆ  ಪೊಲೀಸರು ದರ್ಶನ್ ರನ್ನ  ಬಂಧಿಸಿದ್ದಾರೆ. ಅರೆಸ್ಟ್ ಮಾಡಿದ ಬಳಿಕ ತನ್ನ ಕಾರಿನಲ್ಲಿ ಬರುವುದಾಗಿ ನಟ ದರ್ಶನ್ ಹೇಳಿದ್ದು, ಆದರೆ  ಪೊಲೀಸರು ತಮ್ಮ ಕಾರಿನಲ್ಲೇ ಬೆಂಗಳೂರಿಗೆ ಕರೆದೊಯ್ದುರು.

ದರ್ಶನ್ ಸೇರಿದಂತೆ 10 ಮಂದಿಯನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ದರ್ಶನ್ ಅವರನ್ನು ಬಂಧಿಸಿರುವ ಬೆಂಗಳೂರು ಪೊಲೀಸರು  ಅಜ್ಞಾತಸ್ಥಳದಲ್ಲಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಪವಿತ್ರಾ ಗೌಡ ಅಶ್ಲೀಲ ಫೋಟೊ ಹಾಗೂ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಎಂಬುವವರನ್ನು ಮೈಸೂರಿಗೆ ಕರೆಸಿಕೊಂಡು ಹತ್ಯೆ ಮಾಡಿ ಬೆಂಗಳೂರಿನ ಕಮಾಕ್ಷಿಪಾಳ್ಯದ ರಸ್ತೆ ಬದಿಯ ಚರಂಡಿಯಲ್ಲಿ ಬಿಸಾಡಲಾಗಿತ್ತು ಎಂದು ತಿಳಿದು ಬಂದಿದೆ.

ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷನಿಗೆ ಕರೆ ಮಾಡಿದ ದರ್ಶನ್,  ರೇಣುಕಾಸ್ವಾಮಿಯನ್ನು ಕರೆಸಿಕೊಂಡು ಜೂನ್ 8ರಂದು ರೇಣುಕಾಸ್ವಾಮಿಯನ್ನು ಬಲವಾದ ಆಯುಧದಿಂದ ಹೊಡೆದು ಹತ್ಯೆಗೈದು ಚರಂಡಿಗೆ ಬಿಸಡಲಾಗಿದೆ. ಜೂನ್ 9ರಂದು ನಾಯಿಗಳು ದೇಹವನ್ನು ಎಳೆದಾಡುತ್ತಿದ್ದರಿಂದ ಶವ ಪತ್ತೆಯಾಗಿತ್ತು. ಆತ್ಮಹತ್ಯೆ ಪ್ರಕರಣ ಎಂದು ತನಿಖೆ ಆರಂಭಿಸಿದ ಪೊಲೀಸರಿಗೆ ಅಶ್ಲೀಲ ಪೋಸ್ಟ್ ಮತ್ತು ಕಮೆಂಟ್ ಮಾಡುತ್ತಿದ್ದ ರೇಣುಕಾ ಸ್ವಾಮಿಯನ್ನು ಕರೆಸಿಕೊಂಡ ದರ್ಶನ್ ಸಹಾಯಕರಿಂದ ಕೊಲೆ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗದಲ್ಲಿ ಅಪೋಲೋ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸ್ವಾಮಿ ಶನಿವಾರ ಮನೆಯಿಂದ ಹೊರಟವನು ವಾಪಸ್ ಬಂದಿಲ್ಲ. ಬೆಂಗಳೂರಿನಲ್ಲಿ ಇದ್ದಾನೆ ಎಂದು ಕುಟುಂಬಸ್ಥರಿಗೆ ಮಾಹಿತಿ ಬಂದಿತ್ತು ಎಂದು ತಿಳಿದು ಬಂದಿದೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!