‘ಡೆವಿಲ್’ ಸಿನಿಮಾ ರಿಲೀಸ್ ವಿಳಂಬ?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಬಂಧನಕ್ಕೆ ಒಳಗಾಗಿರುವ ಬೆನ್ನಲ್ಲೇ ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಕೊಲೆ ಮಾಡಿದ್ದು ಸಾಬೀತಾದರೆ ಸಾಕಷ್ಟು ತೊಂದರೆ ಎದುರಿಸಬೇಕಾಗುತ್ತದೆ. ‘ಡೆವಿಲ್’  ಚಿತ್ರವನ್ನು ಅಕ್ಟೋಬರ್​ನಲ್ಲಿ ರಿಲೀಸ್ ಮಾಡೋ ಆಲೋಚನೆ ಚಿತ್ರತಂಡಕ್ಕೆ ಇತ್ತು. ಆದರೆ ಸಿನಿಮಾ ಶೂಟ್ ವೇಳೆ ದರ್ಶನ್ ಕೈಗೆ ಪೆಟ್ಟಾಗಿದ್ದರಿಂದ ಸಿನಿಮಾ ಕೆಲಸ ಮುಂದಕ್ಕೆ ಹೋಯಿತು. ಈಗ ಮತ್ತೊಮ್ಮೆ ‘ಡೆವಿಲ್’ ಸಿನಿಮಾ ಮುಂದಕ್ಕೆ ಹೋಗುವ ಸೂಚನೆ ಸಿಕ್ಕಿದೆ.

ಕೊಲೆ ಕೇಸ್​  ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂದೆ ಪ್ರಕರಣ ಯಾವ ರೀತಿಯಲ್ಲಿ ಸಾಗಬಹುದು ಎನ್ನುವ ಕುತೂಹಲ ಅನೇಕರಲ್ಲಿ ಇದೆ. ಈಗಾಗಲೇ ದರ್ಶನ್ ಜೊತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್  ಸೂಚನೆಯಂತೆ ಕೊಲೆ ಮಾಡಿರುವುದಾಗಿ ಕೆಲವರು ಒಪ್ಪಿಕೊಂಡಿದ್ದಾರೆ ಎಂದು ವರದಿ ಆಗಿದೆ.

‘ಡೆವಿಲ್’ ಚಿತ್ರವನ್ನು ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್ ಅವರ ಜೊತೆ ಈ ಮೊದಲು ‘ತಾರಕ್’ ಸಿನಿಮಾ ಮಾಡಿದ್ದರು. ಈ ಚಿತ್ರ 2017ರಲ್ಲಿ ರಿಲೀಸ್ ಆಗಿತ್ತು. ಇವರು ಎರಡನೇ ಬಾರಿಗೆ ಒಂದಾಗಿದ್ದಾರೆ.  ಜೆ. ಜಯಮ್ಮ ಅವರು ‘ಡೆವಿಲ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ದರ್ಶನ್ ಅವರು ವರ್ಷಕ್ಕೆ ಎರಡು ಸಿನಿಮಾ ರಿಲೀಸ್ ಮಾಡೋ ಟಾರ್ಗೆಟ್​ ಇಟ್ಟುಕೊಂಡಿದ್ದಾರೆ.  ಈ ವರ್ಷ ಅದು ಸಾಧ್ಯವಾಗುತ್ತಿಲ್ಲ. ಕೊಲೆ ಪ್ರಕರಣದಲ್ಲಿ ದರ್ಶನ್ ತೊಂದರೆ ಅನುಭವಿಸಿದರೆ ‘ಡೆವಿಲ್’ ಚಿತ್ರದ ಕೆಲಸಗಳು ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಇರುತ್ತದೆ. ಆಗ ಈ ವರ್ಷ ಅವರ ಯಾವ ಸಿನಿಮಾಗಳೂ ರಿಲೀಸ್ ಆಗುವುದಿಲ್ಲ.

ಕಳೆದ ವರ್ಷಾಂತ್ಯಕ್ಕೆ ದರ್ಶನ್ ಅವರ ‘ಕಾಟೇರ’ ಸಿನಿಮಾ ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಚಿತ್ರ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಗಳಿಕೆ ಕಂಡಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!