‘ದರ್ಶನ್ ಬ್ಯಾನ್ ಅಷ್ಟು ಸುಲಭವಲ್ಲ!’

”ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್  ಅವರನ್ನು ತಕ್ಷಣಕ್ಕೆ ಬ್ಯಾನ್ ಮಾಡಲು ಆಗುವುದಿಲ್ಲ” ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ತಿಳಿಸಿದ್ದಾರೆ.

ಫಿಲ್ಮ್ ಚೇಂಬರ್ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಎನ್ ಎಂ ಸುರೇಶ್ ಅವರು ಮಾತನಾಡಿದರು.

”ಈ ಪ್ರಕರಣವನ್ನು ನಾವು ಖಂಡಿಸುತ್ತೇವೆ. ಅವರನ್ನು ತಕ್ಷಣಕ್ಕೆ ಬ್ಯಾನ್ ಮಾಡಲು ಆಗುವುದಿಲ್ಲ. ಬ್ಯಾನ್ ಮಾಡಲು, ಕಲಾವಿದರ ಸಂಘ ಹಾಗೂ ಇತರ ಅಂಗ ಸಂಸ್ಥೆಗಳು ಭಾಗಿಯಾಗಬೇಕು” ಎಂದರು.

”ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಕೊಲೆ ಪ್ರಕರಣ ಇದ್ದಾಗ ನಾವು ಎಂಟ್ರಿ ಆಗಲು ಆಗುವುದಿಲ್ಲ. 2011 ರಲ್ಲಿ ಸರಿದೂಗಿಸಿದ್ದೆವು. ಅದು ಕುಟುಂಬದ ವಿಚಾರವಾಗಿತ್ತು. ಈಗ ನಾವು ಎಂಟ್ರಿಯಾಗಲು ಸಾಧ್ಯವಿಲ್ಲ. ಕಾನೂನಿನ ತೀರ್ಪು ಬಂದಾಗ ಕೂಡಲೇ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

”ದರ್ಶನ್ ಅವರ ಒಂದು ಸಿನಿಮಾ ಅರ್ಧಕ್ಕೆ ನಿಂತಿದೆ. ಐದಾರು ತಿಂಗಳು ದರ್ಶನ್ ಪ್ರಕರಣದಿಂದ ಹೊರ ಬರಲು ಸಾಧ್ಯವಿಲ್ಲ. ಸಿನಿಮಾಗಳೂ ಘೋಷಣೆ ಆಗಿದೆ. ಕೆಲವರು ಅಡ್ವಾನ್ಸ್ ಕೊಟ್ಟಿದ್ದಾರೆ. ಹೀಗಾಗಿ ಬ್ಯಾನ್ ಅಷ್ಟು ಸುಲಭವಲ್ಲ. ನಾವು ರಕ್ಷಿಸುವ ಕೆಲಸ ಮಾಡುತ್ತಿಲ್ಲ. ಪ್ರಕರಣ ತನಿಖೆ ಹಂತದಲ್ಲಿದೆ” ಎಂದು ಹೇಳಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!