ತಾರಕಕ್ಕೇರಿದ ‘ನಾಡಪ್ರಭು ಕೆಂಪೇಗೌಡ’ ಟೈಟಲ್ ವಿವಾದ

ʻನಾಡಪ್ರಭು ಕೆಂಪೇಗೌಡʼ ಟೈಟಲ್ ವಿವಾದ ತಾರಕಕ್ಕೇರಿದ್ದು, ನಿರ್ದೇಶಕ‌ ನಾಗಾಭರಣ ವಿರುದ್ಧ ನಿರ್ಮಾಪಕ ಕಿರಣ್ ತೋಟಂಬೈಲೆ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಿರಣ್ ಅವರು ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಹೆಸರಿನ ಸಿನಿಮಾ ಘೋಷಣೆ ಮಾಡಿ ಕೆಲವು ತಿಂಗಳು ಕಳೆದಿದೆ.  ನಾಗಾಭರಣ ಅವರು ನಿನ್ನೆ ‘ನಾಡಪ್ರಭು ಕೆಂಪೇಗೌಡ’ ಟೈಟಲ್ ರಿಜಿಸ್ಟರ್ ಮಾಡಿಸಿ ಸಿನಿಮಾ ಘೋಷಿಸಿದ್ದಾರೆ. ಹೀಗಾಗಿ ಇಬ್ಬರ ನಡುವೆ ಟೈಟಲ್‌ ವಿವಾದ ತಾರರಕ್ಕೇರಿದೆ.

ನಿರ್ಮಾಪಕ ಕಿರಣ್ ತೋಟಂಬೈಲೆ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಹೆಸರಿನ ಟೈಟಲ್ ರಿಜಿಸ್ಟರ್ ಮಾಡಿಸಿದ್ದಾರೆ. ಕಿರಣ್  ಜೂನ್ 27 ಕ್ಕೆ ಮುಹೂರ್ತ ಸಮಾರಂಭ ಇಟ್ಟುಕೊಂಡಿದ್ದರು. ನಿರ್ದೇಶಕ ಬಾಬು ʻ ಧರ್ಮಭೀರು ನಾಡಪ್ರಭು ಕೆಂಪೇಗೌಡʼ ಸಿನಿಮಾಗೆ ಆಕ್ಷನ್‌ ಕಟ್‌ ಹೇಳುವವರಿದ್ದರು.  ಇದಾದ ಬಳಿಕ ನಾಗಾಭರಣ ʻನಾಡಪ್ರಭು ಕೆಂಪೇಗೌಡʼ ಕಾಪಿರೈಟ್ಸ್ ನಮ್ಮದು‌ ಎಂದು ನಿರ್ಬಂಧಕ ನೋಟಿಸ್ ಕಳುಹಿಸಿದ್ದರು . ಇದರಿಂದ ಮುಹೂರ್ತ ಕಾರ್ಯಕ್ರಮವನ್ನು ಧರ್ಮಭೀರು ನಾಡಪ್ರಭು ಕೆಂಪೇಗೌಡ ಚಿತ್ರತಂಡ ಮುಂದೂಡಿತ್ತು.

‘ನಾಡಪ್ರಭು ಅನ್ನುವುದು ಸಾರ್ವತ್ರಿಕ ಹೆಸರು. ಅದರ ಮೇಲೆ ಸ್ಟೇ ತರಲು ಸಾಧ್ಯವಿಲ್ಲ. ಅವರು ಕಾಪಿರೈಟ್ಸ್ ರಿಜಿಸ್ಟರ್ ಮಾಡಿಸಿಯೇ ಇಲ್ಲ. ಕೋರ್ಟ್​ಗೆ ಸುಳ್ಳು ದಾಖಲೆ ನೀಡಿದ್ದಾರೆ’ ಎಂದಿದ್ದಾರೆ ಕಿರಣ್. ಸದ್ಯ ಇರುವ ಸ್ಟೇ ವೆಕೇಟ್ ಮಾಡಲು ಕೋರ್ಟ್​ನಲ್ಲಿ ಕಿರಣ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ʻನಾಡಪ್ರಭು ಕೆಂಪೇಗೌಡʼ ಸಿನಿಮಾದಲ್ಲಿ ಡಾಲಿ ಧನಂಜಯ್ ಕೆಂಪೇಗೌಡರ ಪಾತ್ರದಲ್ಲಿ ಮಿಂಚಲಿದ್ದಾರೆ. ಈಗಾಗಲೇ ಪೋಸ್ಟರ್ ಬಿಡುಗಡೆ ಆಗಿದೆ. ಟಿಎಸ್ ನಾಗಾಭರಣ ನಿರ್ದೇಶನ ಮಾಡಲಿದ್ದಾರೆ. ಎಂಎನ್ ಶಿವರುದ್ರಪ್ಪ, ಶುಭಂ ಗುಂಡಾಲ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

——-

Be the first to comment

Leave a Reply

Your email address will not be published. Required fields are marked *

Translate »
error: Content is protected !!