ಜುಲೈ 19ಕ್ಕೆ ‘ಕೃಷ್ಣಂ ಪ್ರಣಯಸಖಿ’ ಮತ್ತೊಂದು ಲಿರಿಕಲ್ ಹಾಡು ಬಿಡುಗಡೆ

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯಸಖಿ’ ಚಿತ್ರದ ಮತ್ತೊಂದು ಲಿರಿಕಲ್ ಹಾಡು ಜುಲೈ 19ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.

ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಇರುವ ‘ದ್ವಾಪರ’ ಎಂಬ ಈ ಹಾಡನ್ನು ತುಮಕೂರಿನ ವಿದ್ಯಾ ವಾಹಿನಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಬಿಡುಗಡೆಯಾಗಲಿದೆ.

ಶ್ರೀನಿವಾಸ್ ರಾಜು ನಿರ್ದೇಶನದ ‘ಕೃಷ್ಣಂ ಪ್ರಣಯಸಖಿ’ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಮಾಳವಿಕಾ ನಾಯರ್ ಪ್ರಮುಖ ಪಾತ್ರದಲ್ಲಿದ್ದಾರೆ.

ಕೆ ಪ್ರಕಾಶ್ ಸಂಕಲನ, ಎವಿ ಶಿವ ಸಾಯಿ, ವಿಜಯ್ ಈಶ್ವರ್ ಅವರ ಸಂಭಾಷಣೆ, ರಾಜು ಸುಂದರಂ ನೃತ್ಯ ನಿರ್ದೇಶನ, ವೆಂಕಟೇಶ್ ರಾಂಪ್ರಸಾದ್ ಛಾಯಾಗ್ರಹಣವಿದೆ. ಸಿನಿಮಾ ಆಗಸ್ಟ್ 15 ರಂದು  ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!