ಜೈಲಿನಲ್ಲಿ ದರ್ಶನ್ ಭೇಟಿಯಾಗಿದ್ದೆ ಎಂದವನಿಗೆ ಸಂಕಷ್ಟ

ಜೈಲಿನಲ್ಲಿ ದರ್ಶನ್ ಭೇಟಿಯಾಗಿದ್ದೆ ಎಂದ ಮಾಜಿ ಕೈದಿ ಸಿದ್ಧರೂಢನಿಗೆ ಪೊಲೀಸ್ ಇಲಾಖೆ ನೋಟೀಸ್ ನೀಡಿದೆ.

ಖಾಸಗಿ ಯೂಟ್ಯೂಬ್ ಹಾಗೂ ವಾಹಿಗಳಿಗೆ ಮಾತನಾಡಿದ ಸಿದ್ದರೂಢ ತಾನು ದರ್ಶನ್ ಅನ್ನು ಜೈಲಿನಲ್ಲಿ ಭೇಟಿಯಾಗಿದ್ದು, ದರ್ಶನ್​ಗೆ  ಧ್ಯಾನ ಹೇಳಿಕೊಟ್ಟೆ. ದರ್ಶನ್ ಜೊತೆಗೆ ಹಲವು ಸಮಯ ಮಾತನಾಡಿದೆ ಎಂದೆಲ್ಲ ಹೇಳಿಕೊಂಡಿದ್ದ. ಆದರೆ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ನ್ನು ಸಿದ್ಧಾರೂಡ ಭೇಟಿ ಆಗಿಲ್ಲ ಎಂದಿದ್ದಾರೆ.

ಸಿದ್ದರೂಢ ನ ಸಂದರ್ಶನಗಳನ್ನು ಗಮನಿಸಿದ್ದ ಮೇಲಾಧಿಕಾರಿಗಳು, ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯನ್ನು ಈ ಬಗ್ಗೆ ಪ್ರಶ್ನೆ ಮಾಡಿದ್ದರು. ವಿಐಪಿ ಸೆಲ್​ನೊಳಗಿದ್ದ ದರ್ಶನ್ ಅನ್ನು ಭೇಟಿ ಆಗಲು ಇತರೆ ಕೈದಿಗೆ ಅವಕಾಶ ನೀಡಲಾಗಿದೆಯೇ ಎಂದು ಪ್ರಶ್ನಿಸಿದ್ದರು. ಅದಕ್ಕೆ   ಜೈಲು ಅಧಿಕಾರಿಗಳು, ದರ್ಶನ್ ಭೇಟಿಗೆ ಯಾವುದೇ ಬೇರೆ ಕೈದಿಗಳಿಗೆ ವಿಶೇಷವಾಗಿ ಜೈಲು ಸೆಲ್​ನೊಳಗೆ ಹೋಗಲು ಅವಕಾಶ ಕೊಟ್ಟಿಲ್ಲವೆಂದು ಉತ್ತರಿಸಿದ್ದಾರೆ.   ಮಾಧ್ಯಮಗಳ ಮುಂದೆ ಸುಳ್ಳು ಹೇಳಿರುವ ಸಿದ್ಧರೂಢನಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿ ವಿಚಾರಣೆಗೆ ಕರೆಯಲಾಗಿದೆ.

”ಇದೇ ತಿಂಗಳ ಎಂಟನೇ ತಾರೀಖು ಬಳ್ಳಾರಿ ಜೈಲಿನಿಂದ ಪರಪ್ಪನ ಅಗ್ರಹಾರ ಜೈಲಿಗೆ ಸಿದ್ಧರೂಢ ಬಂದಿದ್ದ. ಆತನನ್ನು ಒಂಬತ್ತನೇ ತಾರೀಖು ಬಿಡುಗಡೆ ಮಾಡಿದ್ದೆವು. ಆತ ಇಲ್ಲಿ ದರ್ಶನ್ ನ್ನು ಭೇಟಿ ಆಗಿಲ್ಲ. ದರ್ಶನ್ ಸೆಲ್ ಒಳಕ್ಕೆ ಯಾರನ್ನೂ ಬಿಟ್ಟಿಲ್ಲ” ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!