ಸೂಪರ್ ಹಿಟ್ ನಿರೀಕ್ಷೆಯಲ್ಲಿ ಗಣೇಶ್

ಕನ್ನಡ ಚಿತ್ರರಂಗ ಯಶಸ್ಸು ಕಾಣದೆ ಕಂಗಟ್ಟಿರುವ ಬೆನ್ನಲ್ಲೇ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ನಾಳೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದ್ದು, ಗಣೇಶ್ ಸೂಪರ್ ಹಿಟ್ ನಿರೀಕ್ಷೆಯಲ್ಲಿದ್ದಾರೆ.

“ಕೃಷ್ಣಂ ಪ್ರಣಯ ಸಖಿ” ಸಿನಿಮಾ   ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ.  ಗಣೇಶ್‌ ಪಾಲಿಗೆ ಸಿನಿಮಾ ಮತ್ತೊಮ್ಮೆ ಹಿಟ್‌ ಕೊಡಲಿದೆಯಾ ಎಂಬ ಕುತೂಹಲ ಜನರಲ್ಲಿ ಮೂಡಿದೆ.

ಸಿನಿಮಾದ ಹಾಡುಗಳು  ಟ್ರೆಂಡ್‌ ಕ್ರಿಯೇಟ್‌ ಮಾಡಿದ್ದು, ಸಿನಿಮಾ ಮೇಲಿನ ಜನರ ನಿರೀಕ್ಷೆಯನ್ನು ಹೆಚ್ಚಾಗಿಸಿವೆ.   ಕೃಷ್ಣಂ ಪ್ರಣಯ ಸಖಿ ಸಿನಿಮಾದಲ್ಲಿ ಎಂಟು ನಟಿಯರು ಇರುವುದು ಮತ್ತೊಂದು ಹೈಲೈಟ್‌ ಆಗಿದೆ.   ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸುವುದು ಪಕ್ಕಾ ಎಂದು ಹಲವರು ಅಭಿಪ್ರಾಯ ಪಡುತ್ತಿದ್ದಾರೆ.

ಚಿತ್ರ  ಬಿಡುಗಡೆಯ ಒಂದು ದಿನ ಮುಂಚಿತವಾಗಿಯೇ ಸದ್ದು ಮಾಡುತ್ತಿದೆ. ಫ್ಯಾನ್ಸ್ ಪೇಯ್ಡ್ ಪ್ರೀಮಿಯರ್ ಶೋ ಹೌಸ್ ಫುಲ್ ಆಗಿದ್ದು, ಸ್ಯಾಂಡಲ್‌ವುಡ್‌ ಅದೃಷ್ಟದ ಬಗಿಲು ತೆರೆಯುವಂತೆ ಕಾಣುತ್ತಿದೆ.  ಕೆಲವೆಡೆ ಮಾತ್ರ ಪೇಯ್ಡ್ ಪ್ರೀಮಿಯರ್ ಶೋ ಗೆ ಚಿತ್ರತಂಡ ಪ್ಲಾನ್ ಮಾಡಿತ್ತು. ರಾಜ್ಯಾದ್ಯಂತ 300 ಕ್ಕೂ ಹೆಚ್ಚು ಪ್ರದರ್ಶನಕ್ಕೆ ಚಿತ್ರತಂಡ ಪ್ಲಾನ್‌ ಮಾಡಿದೆ. ಈ ಶೋನ ಬಹುತೇಕ ಟಿಕೆಟ್‌ ಸೋಲ್ಡ್‌ ಔಟ್‌ ಆಗಿದೆ.

 ಗಣೇಶ್‌ ಅವರ ವೃತ್ತಿ ಬದುಕಿನಲ್ಲೇ ‘ಕೃಷ್ಣಂ ಪ್ರಣಯ ಸಖಿ’ ದೊಡ್ಡ ಬಜೆಟ್‌ನ ಸಿನಿಮಾ. ನಿರ್ದೇಶನ ಶ್ರೀನಿವಾಸ ರಾಜು , ಸಂಗೀತ ನಿರ್ದೇಶನ ಅರ್ಜುನ್ ಜನ್ಯ ಮಾಡಿದ್ದಾರೆ.

ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದ ನಟಿ ಮಾಳವಿಕಾ ನಾಯರ್‌ ಅವರು ‘ಕೃಷ್ಣಂ ಪ್ರಣಯ ಸಖಿ’ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಶರಣ್ಯಾ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶಿವಧ್ವಜ್, ಗಿರಿ ಮುಂತಾದವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ನಟಿಸಿದ್ದಾರೆ. ತ್ರಿಶೂಲ್ ಎಂಟರ್‌ಟೇನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ರುದ್ರಪ್ಪ ಈ ಸಿನಿಮಾಕ್ಕೆ ಹಣ ಹಾಕಿದ್ದಾರೆ. ವೆಂಕಟ್ ರಾಮ್ ಪ್ರಸಾದ್ ಛಾಯಾಗ್ರಹಣ ಮಾಡಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!