ಗುರುನಂದನ್

ಗುರುನಂದನ್ ಹೊಸ ಸಿನಿಮಾಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಚಾಲನೆ

ಪ್ರತಿಭಾವಂತ ಕಲಾವಿದ ಗುರುನಂದನ್ ಅವರು ತಮ್ಮ ಅಭಿಮಾನಿಗಳಿಗೆ ಒಂದು ಸಂತಸದ ಸುದ್ದಿಯನ್ನು ನೀಡಿದ್ದಾರೆ. ಹೌದು, ಮಂಡಿಮನೆ ಟಾಕೀಸ್ ಬ್ಯಾನರ್‌ನಲ್ಲಿ ಅವರು ನಿರ್ಮಾಪಕರಾಗಿ ಮತ್ತು ನಾಯಕನಾಗಿ ಹೊಸ ಸಿನಿಮಾಗೆ ಚಾಲನೆ ನೀಡಿದ್ದಾರೆ. ಈ ಚಿತ್ರದ ಮುಹೂರ್ತವು ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದಿದ್ದು, ಶ್ರೀಮತಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಕ್ಲ್ಯಾಪ್ ಮಾಡಿ ಚಿತ್ರಕ್ಕೆ ಶುಭ ಹಾರೈಸಿದರು.

ಸಿಎಂ ವಿಶೇಷ ಅಧಿಕಾರಿ ಶ್ರೀವೆಂಕಟೇಶ್ ಮತ್ತು ಗೋಲ್ಡ್ ಪಿಂಚ್ ಹೋಟೇಲ್ ಉದ್ಯಮಿ ಪ್ರಕಾಶ್ ಶೆಟ್ಟಿಯವರು ಸೇರಿದಂತೆ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತಮ್ಮ ಮಾತುಗಳಲ್ಲಿ, ಅವರು ಗುರುನಂದನ್ ಅವರ ಹೊಸ ಪ್ರಯತ್ನಕ್ಕೆ ಶುಭ ಹಾರೈಸಿದರು ಮತ್ತು ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಆಶಿಸಿದರು.

ಗುರುನಂದನ್

ಈ ಚಿತ್ರವನ್ನು ಸುಮಂತ್ ಗೌಡ ನಿರ್ದೇಶಿಸುತ್ತಿದ್ದಾರೆ. ಭೀಮ ಕ್ಯಾಮೆರಾ ಮ್ಯಾನ್ ಮತ್ತು ಫಸ್ಟ್ ರಾಂಕ್ ರಾಜು ಖ್ಯಾತಿಯ ಕಿರಣ್ ರವೀಂದ್ರನಾಥ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶರತ್ ಚಕ್ರವರ್ತಿ ಅವರು ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

ಗುರುನಂದನ್ ಅವರ ಜೊತೆಗೆ ‘ಹರಿಕಥೆ ಅಲ್ಲ ಗಿರಿಕಥೆ’ ಖ್ಯಾತಿಯ ತಪಸ್ವಿನಿ ಪೊಣ್ಣಚ್ಚ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ತಬಲಾ ನಾಣಿ, ಧರ್ಮಣ್ಣ ಸೇರಿದಂತೆ ಹಲವಾರು ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.

ಗುರುನಂದನ್

Be the first to comment

Leave a Reply

Your email address will not be published. Required fields are marked *

Translate »
error: Content is protected !!