ಲಿಪ್​ ಲಾಕ್

ಪ್ರೇಮಕಥೆ ‘ಲಿಪ್ ಲಾಕ್’ ಪ್ರಾರಂಭ

ಒಂದೇ ಶಾಟ್​ನಲ್ಲಿ ಚಿತ್ರೀಕರಣ ಮಾಡಲಾಗಿದ್ದ ‘ಯಂಗ್ ಮ್ಯಾನ್’ ಸಿನಿಮಾ ನಿರ್ದೇಶನ ಮಾಡಿದ್ದ ಮುತ್ತುರಾಜ್ ಇದೀಗ ‘ಲಿಪ್​ಲಾಕ್’ ಹೆಸರಿನ ಸಿನಿಮಾ ನಿರ್ದೇಶನ ಮಾಡಲು ಮುಂದಾಗಿದ್ದಾರೆ.

ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೆ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು.  ಸಿನಿಮಾ ಮುಹೂರ್ತಕ್ಕೆ ಹಲವು ಗಣ್ಯರು ಆಗಮಿಸಿ  ಶುಭ ಹಾರೈಸಿದರು.

ಲಿಪ್ ಲಾಕ್

ನಿರ್ದೇಶಕ ಮುತ್ತುರಾಜ್ ಮಾತನಾಡಿ, ‘ಲಿಪ್ ಲಾಕ್’ ಸಿನಿಮಾದ ಹೆಸರು ಕೇಳುತ್ತಿದ್ದಂತೆ ಇದರ ಕತೆ ಏನೋ ಇರಬಹುದು, ಹಸಿ-ಬಿಸಿ ದೃಶ್ಯಗಳು ಇರಬಹುದು ಎಂದು ಊಹಿಸಲಾಗುತ್ತದೆ. ಆದರೆ ಹಾಗೇನೂ ಇಲ್ಲ.  ನಾವು ಮಾಡಲು ಹೊರಟಿರುವ ‘ಲಿಪ್ ಲಾಕ್’ ಸಿನಿಮಾ ಪರಿಶುದ್ಧ ಪ್ರೇಮಕಥೆ ಆಗಿದೆ. ಯಾವುದೇ ಮುಜುಗರವಿಲ್ಲದೆ ಕುಟುಂಬದ ಸಮೇತ ಎಲ್ಲರೂ ನೋಡಬಹುದಾದ ಕೌಟುಂಬಿಕ ಕಥೆ ಇದು’ ಎಂದರು.

ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯುತ್ತದೆ‌. ಕರಣ್ ಆರ್ಯನ್, ತ್ರಿವಿಕ್ರಮ್ ಹಾಗೂ ಚಿತ್ರದ ನಿರ್ಮಾಪಕರೂ ಆಗಿರುವ ಹೇಮಂತ್ ಕುಮಾರ್  ಚಿತ್ರದ ನಾಯಕರಾಗಿದ್ದು, ನಾಯಕಿಯರಾಗಿ ದೀಪ, ಜಗದೀಶ್, ಸೃಷ್ಟಿ , ನಿಹಾರಿಕಾ ನಟಿಸುತ್ತಿದ್ದಾರೆ. ಜಗಪ್ಪ, ಆನಂದ್, ಕರಿಬಸವ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಲೋಕಿ ತವಸ್ಯ ಸಂಗೀತ ನಿರ್ದೇಶನ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿದೆ‌.

ನಿರ್ಮಾಪಕನಾಗಿ ಇದು ಮೊದಲ ಚಿತ್ರ . ಹೇಮಂತ್ ಸಿನಿಮಾಸ್ ಹಾಗೂ ಪರಿ ಮೂವೀ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನಿರ್ಮಾಣದ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದೇನೆ ಎಂದರು ಹೇಮಂತ್ ಕೃಷ್ಣಮೂರ್ತಿ.

ನಟ ಕರಣ್ ಆರ್ಯನ್, ಪದ್ಮಾವತಿ, ಧಾರಾವಾಹಿ ಖ್ಯಾತಿಯ ತ್ರಿವಿಕ್ರಮ್, ನಟಿಯರಾದ ದೀಪ ಜಗದೀಶ್ , ಸೃಷ್ಟಿ ಹಗೂ ನಿಹಾರಿಕಾ  ಚಿತ್ರದ ಕುರಿತು ಮಾತನಾಡಿದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!