ನಿರ್ದೇಶಕ, ನಿರ್ಮಾಪಕ ಕೋಡಳ್ಳಿ ಶಿವರಾಮ್ ನಿಧನ

ನ್ನಡದಲ್ಲಿ ಹಲವು ಭಿನ್ನ ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಿಸಿದ್ದರಾಷ್ಟ್ರ, ರಾಜ್ಯ ಪ್ರಶಸ್ತಿ ವಿಜೇತ ಕೋಡಳ್ಳಿ ಶಿವರಾಮ್ ನಿಧನರಾಗಿದ್ದಾರೆ. 

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೋಡಳ್ಳಿ ಶಿವರಾಮ್ ಅವರು ಸೆಪ್ಟೆಂಬರ್ 17ರ ರಾತ್ರಿ ನಿಧನರಾಗಿದ್ದಾರೆ. ಶಿವರಾಮ್ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

1978ರಲ್ಲಿ ರಿಲೀಸ್ ಆಗಿದ್ದ ‘ಗ್ರಹಣ’ ಸಿನಿಮಾಗೆ ಶಿವರಾಮ್ ಚಿತ್ರ ಕಥೆ ಜೊತೆಗೆ ನಿರ್ಮಾಪಕರು ಕೂಡ ಆಗಿದ್ದರು. ಟಿಎಸ್ ನಾಗಾಭರಣ ಅವರು ಸಿನಿಮಾ ನಿರ್ದೇಶನ ಮಾಡಿದ್ದರು. ಈ ಸಿನಿಮಾಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಸಿಕ್ಕಿತ್ತು.

ಶಿವರಾಮ್ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದಂತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ ಗಮನ ಸೆಳೆದಿದ್ದರು. ಅವರಿಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳು ಸಿಕ್ಕಿದ್ದು, ಪ್ರಶಸ್ತಿ ಆಯ್ಕೆ ಸಮಿತಿಯಲ್ಲೂ ಇದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!