ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ದರ್ಶನ್‌ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಶನಿವಾರ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದ ದರ್ಶನ್ ಪರ ವಕೀಲರು ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಸೋಮವಾರಕ್ಕೆ ಜಾಮೀನು ಅರ್ಜಿ ಮುಂದೂಡಲಾಗಿತ್ತು. ಹೀಗಾಗಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಜಾಮೀನು ಅರ್ಜಿ ವಿಚಾರವಾಗಿ ಜೈಲು ಸಿಬ್ಬಂದಿಯಿಂದ  ಮಾಹಿತಿ ಪಡೆಯುತ್ತಿದ್ದಾರೆ. ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ವಕೀಲರು ಜೈಲಿಗೆ ಭೇಟಿ ನೀಡುವ ಸಾಧ್ಯತೆಯಿದೆ.

ಒಂದು ವೇಳೆ ಜಾಮೀನು ಸಿಗದೇ ಇದ್ದರೆ ಮುಂದೆ ಜೈಲು ಬದಲಾವಣೆಯ ಬಗ್ಗೆಯೂ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌, ಪ್ಲಾಸ್ಟಿಕ್‌ ಚೇರ್‌, ದಿಂಬು, ಬೆಡ್‌ಗೆ ಬೇಡಿಕೆ ಇಟ್ಟಿದ್ದಾರೆ.

ಬೆನ್ನು ನೋವಿನ ಸಮಸ್ಯೆ ಇದ್ದರೂ ಒಂದು ಪ್ಲಾಸ್ಟಿಕ್ ಚೇರ್ ಸಿಗುತ್ತಿಲ್ಲ. ದಿಂಬು, ಬೆಡ್ ಕೂಡ ಜೈಲು ಅಧಿಕಾರಿಗಳು ಕೊಡುತ್ತಿಲ್ಲ. ಹೀಗಾಗಿ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಜೈಲು ಬದಲಾವಣೆಗೂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ದಟ್ಟವಾಗಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!