ಶಿವರಾಜ್ ಕುಮಾರ್ ಶ್ರೀರಂಗಪಟ್ಟಣ ದಸರಾ ಉದ್ಘಾಟನೆ

ಶ್ರೀರಂಗಪಟ್ಟಣ ಪಾರಂಪರಿಕ ದಸರಾ ಉತ್ಸವಕ್ಕೆ ಚಾಲನೆ ನೀಡಲು ಆಗಮಿಸುವಂತೆ ಚಲನಚಿತ್ರ ನಟ  ಶಿವರಾಜ್ ಕುಮಾರ್ ಅವರಿಗೆ ಜಿಲ್ಲಾಡಳಿತ ಆಹ್ವಾನ ನೀಡಿದೆ.

ಶಾಸಕ ರಮೇಶ್ ಬಂಡಿ ಸಿದ್ದೇಗೌಡ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಕುಮಾರ, ಸಿಇಓ ಶೇಖ್ ತನ್ವೀರ್ ಆಸೀಫ್  ಆಮಂತ್ರಣ ನೀಡಿ ಸನ್ಮಾನಿಸಿದರು. ಇದೇ ವೇಳೆ ಮಾತನಾಡಿದ ಶಿವರಾಜ್ ಕುಮಾರ್ ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು  ಅತ್ಯಂತ ಹರ್ಷದ ಸಂಗತಿಯಾಗಿದೆ ಎಂದರು.

ಶ್ರೀರಂಗಪಟ್ಟಣ ಪಾರಂಪರಿಕ ದಸರಾ ಉತ್ಸವಕ್ಕೆ ಚಾಲನೆ ನೀಡಲು ಆಯ್ಕೆ ಮಾಡಿರುವುದಕ್ಕೆ  ಶಿವರಾಜ್ ಕುಮಾರ್  ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!