ಬಿಗ್ ಬಾಸ್

ಬಯಲಾದ ಬಿಗ್ ಬಾಸ್ ಸ್ಪರ್ಧಿಯ ವಂಚನೆ ಪ್ರಕರಣ!

ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ವಕೀಲ ಜಗದೀಶ್ ಮಾಡಿರುವ ವಂಚನೆ ಪ್ರಕರಣ  ಬಯಲಾಗಿದೆ.

ಬಿಗ್ ಬಾಸ್ ಮನೆಯಲ್ಲಿರುವ ಕೆಎನ್ ಜಗದೀಶ್ ಕುಮಾರ್ ವಕೀಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.   ಮೇ 7ರಂದು ಜಗದೀಶ್ ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದೆ. ಇದಕ್ಕೆ ಅವರು ಮಾಡಿದ ವಂಚನೆಯೇ ಕಾರಣ ಎನ್ನಲಾಗುತ್ತಿದೆ.

ಜಗದೀಶ್  ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್​ ನಕಲಿ ಎಂದು ದೃಢಪಟ್ಟಿದೆ.  ಅವರ ಡಿಗ್ರೀ ಹಾಗೂ ಎಲ್​ಎಲ್​ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವವರು ಜಗದೀಶ್ ವಿರುದ್ಧ ದೂರು ನೀಡಿದ್ದರು. ಅವರ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರ ಬಿದ್ದಿದೆ. ದೆಹಲಿ ಬಾರ್ ಕೌನ್ಸಿಲ್ ಆದೇಶದ ಪ್ರಕಾರ ಜಗದೀಶ್  ಅವರು ಯಾವುದೇ ಕೋರ್ಟ್​​ನಲ್ಲಿ ವಾದ ಮಂಡಿಸುವಂತಿಲ್ಲ.

ಜಗದೀಶ್  ಅವರು ಒಮ್ಮೆ ಹೊರಕ್ಕೆ ಹೋಗುವ ನಿರ್ಧಾರಕ್ಕೂ ಬಂದಿದ್ದರು. ನಂತರ ಮನಸ್ಥಿತಿ ಬದಲಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರು ಡಾಮಿನೇಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಕಾರಣದಿಂದ  ಎಲ್ಲರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!