ನ. 8ರಂದು ‘ನವಗ್ರಹ’ ಮರು ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ನವಗ್ರಹ’ ಚಿತ್ರ ನವೆಂಬರ್ 8 ರಂದು ಮರುಬಿಡುಗಡೆಗೆ ಸಿದ್ಧವಾಗಿದೆ.

ಮೀನಾ ತೂಗುದೀಪ ಶ್ರೀನಿವಾಸ್ ನಿರ್ಮಾಣ ಮಾಡಿರುವ ಈ ಚಿತ್ರವನ್ನು ದಿನಕರ್ ತೂಗುದೀಪ ಡೈರೆಕ್ಷನ್ ಮಾಡಿದ್ದಾರೆ. ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ಎ.ವಿ. ಕೃಷ್ಣಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ.

ದರ್ಶನ್ ಸಿನಿಮಾದಲ್ಲಿ ಮೇನ್ ವಿಲನ್ ರೋಲ್ ಮಾಡಿದ್ದರು. ವಿನೋದ್ ಪ್ರಭಾಕರ್, ನಾಗೇಂದ್ರ ಅರಸ್, ತರುಣ್ ಸುಧೀರ್, ಧರ್ಮ ಕೀರ್ತಿರಾಜ್ ಸೇರಿದಂತೆ ಕನ್ನಡದ ಹೆಸರಾಂತ ವಿಲನ್ ಮಕ್ಕಳು ಈ ಚಿತ್ರದಲ್ಲಿ ಅಭಿನಯಿಸಿದ್ದರು. ಕನ್ನಡದಲ್ಲಿ ಇದು ಒಂದು ಹೊಸ ಪ್ರಯೋಗ ಆಗಿತ್ತು. ಒಳ್ಳೆ ಪರಿಕಲ್ಪನೆ ಈ ಚಿತ್ರದಲ್ಲಿತ್ತು.

”ನನ್ನ ನಿರ್ದೇಶನದ 2ನೇ ಚಿತ್ರ ‘ನವಗ್ರಹ’, ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕರ ಮಕ್ಕಳನ್ನು ಒಟ್ಟಿಗೆ ತೆರೆಯ ಮೇಲೆ ತಂದ ಒಂದು ಪ್ರಾಮಾಣಿಕ ಪ್ರಯತ್ನ. 16 ವರ್ಷಗಳ ಹಿಂದೆ ಬಿಡುಗಡೆಯಾಗಿ ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹದಿಂದ ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರ ಒತ್ತಾಯದ ಫಲವಾಗಿ ಇದೇ ನವೆಂಬರ್ 8 ರಂದು ಮರುಬಿಡುಗಡೆಗೆ ಸಿದ್ಧವಾಗಿದೆ. ಮತ್ತೊಮ್ಮೆ ಬೆಳ್ಳಿಪರದೆಯ ಮೇಲೆ ನೋಡಿ ಆನಂದಿಸಿ” ಎಂದು ದಿನಕರ್ ತೂಗುದೀಪ ಹೇಳಿದ್ದಾರೆ.

‘ನವಗ್ರಹ’ 2008ರ ನವೆಂಬರ್ 7ರಂದು ಮೊದಲ ಬಾರಿಗೆ ಚಿತ್ರ ತೆರೆಕಂಡಿತ್ತು ಇದೀಗ ನವೆಂಬರ್ 8ರಂದು ಮತ್ತೊಮ್ಮೆ ಮರು ಬಿಡುಗಡೆಯಾಗುತ್ತಿದೆ. ಭರ್ಜರಿ ಯಶಸ್ಸು ಕಂಡಿದ್ದ ಈ ಚಿತ್ರ ಮತ್ತೊಮ್ಮೆ ತೆರೆ ಕಾಣುತ್ತಿರುವುದು ದರ್ಶನ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!