ಕಲ್ಟ್ ಸಿನಿಮಾ

ಕಲ್ಟ್ ಸಿನಿಮಾ ಚಿತ್ರೀಕರಣಕ್ಕೆ ತಡೆ

ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್​  ಹೊಸ ಸಿನಿಮಾ ‘ಕಲ್ಟ್​’  ಚಿತ್ರೀಕರಣಕ್ಕೆ ಅರಣ್ಯಾಧಿಕಾರಿಗಳು ತಡೆ ನೀಡಿದ್ದಾರೆ.

ಕಲ್ಟ್ ಚಿತ್ರ ತಂಡ ಅನುಮತಿ ಇಲ್ಲದೆ ಸಣಾಪೂರ ಗ್ರಾಮದ ತುಂಗಭದ್ರಾ ನದಿ ದಡದಲ್ಲಿ ಬೆಂಕಿ ಹಚ್ಚಿ ಚಿತ್ರೀಕರಣ ನಡೆಸಲು ಮುಂದಾಗಿದೆ. ಈ ವೇಳೆ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಚಿತ್ರೀಕರಣಕ್ಕೆ ತಡೆ ನೀಡಿದ್ದಾರೆಂದು ತಿಳಿದು ಬಂದಿದೆ.

ಅನುಮತಿ ಪಡೆದ ನಂತರ ಚಿತ್ರೀಕರಣ ಮಾಡಲು ಅವಕಾಶ ನೀಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಕಲ್ಟ್ ಚಿತ್ರತಂಡಕ್ಕೆ ಸೂಚನೆ  ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ಕಲ್ಟ್ ಚಿತ್ರತಂಡ  ಹಂಪಿ ಸೇರಿದಂತೆ ನಾನಾ ಕಡೆಗಳಲ್ಲಿ ಚಿತ್ರೀಕರಣ ನಡೆಸಿದೆ. ಅದೇ ರೀತಿಯಾಗಿ  ರಂಗಾಪೂರ, ಸಣಾಪೂರ ಕೆರೆ ಭಾಗದಲ್ಲಿ ಚಿತ್ರೀಕರಣಕ್ಕೆ ಸೆಟ್‌ ಹಾಕಿತ್ತು.

ಈ ಹಿಂದೆ ಚಿತ್ರೀಕರಣದ ವೇಳೆ ದುಬಾರಿ ಡ್ರೋನ್ ಮುರಿದು, ಡ್ರೋನ್ ಮಾಲೀಕ ಆತ್ಮಹತ್ಯೆಗೆ ಮುಂದಾಗಿ ದೊಡ್ಡ ವಿವಾದ  ಆಗಿತ್ತು. ಈಗ  ಸಿನಿಮಾಕ್ಕೆ ರಾಜ್ಯ ಅರಣ್ಯ ಇಲಾಖೆ  ಶಾಕ್ ಕೊಟ್ಟಿದೆ. ಅರಣ್ಯ ಪ್ರದೇಶದಲ್ಲಿ ಸಿನಿಮಾ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಅನಿಲ್ ಕುಮಾರ್ ನಿರ್ದೇಶನದ ‘ಕಲ್ಟ್‌’ ಚಿತ್ರದಲ್ಲಿ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!