ಅನುರಾಗ್ ಕಶ್ಯಪ್

ಸುಜಯ್ ಶಾಸ್ತ್ರೀಯವರ ‘8’ ಚಿತ್ರದಲ್ಲಿ ಅನುರಾಗ್ ಕಶ್ಯಪ್

ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರಾದಂಡು ಒಬ್ಬೊಬ್ಬರಾಗಿ ಹೆಜ್ಜೆ ಹಾಕುತ್ತಿರುವುದು ಹೊಸ ವಿಷಯವಲ್ಲ. ಈಗಾಗಲೇ ಅನೇಕ ಸಿನಿಮೇಕರ್ಸ್, ಸ್ಟಾರ್ಸ್ ಕಾಲಿವುಡ್, ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಧೂಳ್ ಎಬ್ಬಿಸುತ್ತಿದ್ದಾರೆ. ಇದೀಗ ಹೊಸ ಸೇರ್ಪಡೆ ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್.

ಅನುರಾಗ್ ಕಶ್ಯಪ್ ದಕ್ಷಿಣದ ಕಡೆಗೆ ಬಂದಾಗಿದೆ. ತಮಿಳಿನ ಮಹಾರಾಜ ಚಿತ್ರದಲ್ಲಿ ಅದ್ಭುತ ಪಾತ್ರದಲ್ಲಿ ಗಮನಸೆಳೆದಿದ್ದಾರೆ. ಈ ಮೂಲಕ ತಮಿಳು ಪ್ರೇಕ್ಷಕರನ್ನ ರಂಜಿಸಿದ್ದಾರೆ. ತೆಲುಗಿನ ಡಕಾಯಿತ್ ಚಿತ್ರದಲ್ಲಿ ಕಪಟ ಪೊಲೀಸ್ ಆಫೀಸರ್ ನಟಿಸಿರುವ ಅವರೀಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಸ್ಯ ನಟ-ನಿರ್ದೇಶಕ ಸುಜಯ್ ಶಾಸ್ತ್ರಿ ಈ ಚಿತ್ರವನ್ನ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಮೂಲಕ ಒಂದು ಒಳ್ಳೆ ಕಥೆಯನ್ನ ಹೇಳುತ್ತಿದ್ದಾರೆ.

ಅನುರಾಗ್ ಕಶ್ಯಪ್

8 ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನಲ್ಲಿ ನಿನ್ನೆ ನಡೆಯಿತು. ಈ ವೇಳೆ ನಿರ್ದೇಶಕ ಕಂ ನಟ ಅನುರಾಗ್ ಕಶ್ಯಪ್ ಮಾತನಾಡಿ, ಇದೊಂದು ಎಮೋಷನಲ್ ಕಥೆ. ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಚಿತ್ರ ಕೂಡ ಅದನ್ನೇ ಹೇಳುತ್ತದೆ. ಅರವಿಂದ್ ಹಾಗೂ ಸುಜಯ್ ಶಾಸ್ತ್ರೀಗೆ ಧನ್ಯವಾದ ಎಂದರು.

ಕನ್ನಡದ ‘8’ ಎಂಬ ಚಿತ್ರದಲ್ಲಿ ಅನುರಾಗ್ ಕಶ್ಯಪ್ ನಟಿಸುತ್ತಿದ್ದಾರೆ. ಹಾಸ್ಯನಟ ಸುಜಯ್ ಶಾಸ್ತ್ರೀ ಈ ಚಿತ್ರದ ಸಾರಥಿ. ಎವಿಆರ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಅರವಿಂದ್ ವೆಂಕಟೇಶ್ ರೆಡ್ಡಿ ಚಿತ್ರಕ್ಕೆ ಹಣ ಹೂಡುತ್ತಿದ್ದಾರೆ.ಫುಟ್‌ಬಾಲ್ ಆಟದ ಸುತ್ತ ನಡೆಯುವ ಕಥೆ ‘8’ ಚಿತ್ರದಲ್ಲಿದೆ.

ಅನುರಾಗ್ ಕಶ್ಯಪ್

ಕನ್ನಡ ಚಿತ್ರರಂಗಕ್ಕೆ ಸದಾ ಅಭಿರುಚಿ ಸಿನಿಮಾಗಳನ್ನು ನೀಡುವ ಉದ್ದೇಶದಿಂದ ಶುರುವಾಗಿರುವ ಎವಿಆರ್ ಚೊಚ್ಚಲ ಕಾಣಿಕೆ 8. ಅರವಿಂದ್ ರೆಡ್ಡಿ ನಿರ್ಮಾಣದಲ್ಲಿ ಈ ಸಿನಿಮಾ‌ ಮೂಡಿ ಬರಲಿದೆ. ಈ ಚಿತ್ರದ ಜೊತೆಗೆ ಸಿಂಪಲ್ ಸುನಿ ಜೊತೆಗೂ ಎವಿಆರ್ ಕೈ ಜೋಡಿಸಿದೆ. ಬಿಗ್ ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಾಯಕನಾಗಿ ನಟಿಸಲಿರುವ ಈ ಸಿನಿಮಾ ಈಗಾಗಲೇ ಘೋಷಣೆಯಾಗಿದೆ. ಸದ್ಯ 8 ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!