ನಿರ್ದೇಶಕ ಬಿ ಎಸ್ ಲಿಂಗದೇವರು ನೇತೃತ್ವದ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯು 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಿದೆ. 2020ರಲ್ಲಿ ಸೆನ್ಸಾರ್ ಪ್ರಮಾಣ ಪತ್ರ ಪಡೆದ ಒಟ್ಟು 66 ಸಿನಿಮಾಗಳನ್ನು ವೀಕ್ಷಣೆ ಮಾಡಿ, ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಬಾರಿ ಪೃಥ್ವಿ ಕೋಣನೂರು ನಿರ್ದೇಶನ ದ ಪಿಂಕಿ ಎಲ್ಲಿ..? ಸಿನಿಮಾ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ. ‘ಜಂಟಲ್ ಮ್ಯಾನ್’ ಚಿತ್ರದ ಅಭಿನಯದ ಕ್ಕಾಗಿ ಪ್ರಜ್ವಲ್ ದೇವರಾಜ್ ಅವರಿಗೆ ಇದೇ ಮೊದಲ ಬಾರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಉಳಿದಂತೆ ಯಾರೆಗೆಲ್ಲಾ ಪ್ರಶಸ್ತಿ ಇಲ್ಲಿವೆ :
2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ
- ಸುಬ್ಬಯ್ಯ ನಾಯ್ಡು ಪ್ರಶಸ್ತಿ (ಅತ್ಯುತ್ತಮ ನಟ) : ಪ್ರಜ್ವಲ್ ದೇವರಾಜ್ (ಜಂಟಲ್ಮನ್)
- ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಪಿಂಕಿ ಎಲ್ಲಿ)
- ಅತ್ಯುತ್ತಮ ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ? (ನಿರ್ದೇಶನ: ಪೃಥ್ವಿ ಕೊಣನೂರು)
- 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ (ನಿರ್ದೇಶನ: ಚೇತನ್ ಮುಂಡಾಡಿ)
- 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು (ನಿರ್ದೇಶನ: ಬಾಬು ಈಶ್ವರ್ ಪ್ರಸಾದ್)
- ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು (ನಿರ್ದೇಶನ: ರಾಮದಾಸ ನಾಯ್ಡು & ಶಿವಧ್ವಜ್ ಶೆಟ್ಟಿ)
- ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್ (ನಿರ್ದೇಶನ: ಸಂಗಮೇಶ ಎಸ್ ಸಜ್ಜನರ್)
- ಅತ್ಯುತ್ತಮ ಮಕ್ಕಳ ಚಿತ್ರ: ಪದಕ (ನಿರ್ದೇಶನ: ಆದಿತ್ಯ ಆರ್ ಚಿರಂಜೀವಿ)
- ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ (ನಿರ್ದೇಶನ: ಗಣೇಶ್ ಹೆಗ್ಡೆ)
- ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ಜೀಟಿಗೆ (ತುಳು ಭಾಷೆ, ನಿರ್ದೇಶನ: ಸಂತೋಷ್ ಮಾಡ)
- ಕೆ ಎಸ್ ಅಶ್ವಥ್ ಪ್ರಶಸ್ತಿ (ಅತ್ಯುತ್ತಮ ಪೋಷಕ ನಟ) : ರಮೇಶ್ ಪಂಡಿತ್ (ತಲೆದಂಡ)
- ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ (ದಂತಪುರಾಣ)
- ಅತ್ಯುತ್ತಮ ಕಥೆ: ಶಶಿಕಾಂತ್ ಗಟ್ಟಿ (ರಾಂಚಿ)
- ಅತ್ಯುತ್ತಮ ಚಿತ್ರಕಥೆ: ರಾಘವೇಂದ್ರ ಕುಮಾರ್ (ಚಾಂದಿನಿ ಬಾರ್)
- ಅತ್ಯುತ್ತಮ ಸಂಭಾಷಣೆ: ವೀರಪ್ಪ ಮರಳವಾಡಿ (ಹೂವಿನ ಹಾರ)
- ಅತ್ಯುತ್ತಮ ಛಾಯಾಗ್ರಹಣ: ಅಶೋಕ್ ಕಶ್ಯಪ್ (ತಲೆದಂಡ)
- ಅತ್ಯುತ್ತಮ ಸಂಗೀತ ನಿರ್ದೇಶನ: ಗಗನ್ ಬಡೇರಿಯಾ (ಮಾಲ್ಗುಡಿ ಡೇಸ್)
- ಅತ್ಯುತ್ತಮ ಸಂಕಲನ: ನಾಗೇಂದ್ರ ಕೆ. (ಆ್ಯಕ್ಟ್ 1978)
- ಅತ್ಯುತ್ತಮ ಬಾಲನಟ: ಅಹಿಲ್ ಅನ್ಸಾರಿ (ದಂತ ಪುರಾಣ)
- ಅತ್ಯುತ್ತಮ ಬಾಲನಟಿ: ಬೇಬಿ ಹಿತೈಷಿ ಪೂಜಾರ್ (ಪಾರು)
- ಅತ್ಯುತ್ತಮ ಕಲಾ ನಿರ್ದೇಶನ: ಗುಣಶೇಖರ್ (ಬಿಚ್ಚುಗತ್ತಿ)
- ಅತ್ಯುತ್ತಮ ಗೀತ ರಚನೆ: ಗಾರ್ಗಿ ಕಾರೆಹಕ್ಲು (‘ಪರ್ಜನ್ಯ’ ಚಿತ್ರದ ‘ಮೌನವು ಮಾತಾಗಿದೆ’) ಮತ್ತು ಸಚಿನ್ ಶೆಟ್ಟಿ ಕುಂಬ್ಳೆ (‘ಈ ಮಣ್ಣು’ ಚಿತ್ರದ ‘ದಾರಿಯೊಂದು ಹುಡುಕುತ್ತಿದೆ’
- ಅತ್ಯುತ್ತಮ ಹಿನ್ನೆಲೆ ಗಾಯಕ: ಅನಿರುದ್ಧ್ ಶಾಸ್ತ್ರಿ (ಆಚಾರ್ಯ ಶ್ರೀ ಶಂಕರ)
- ಅತ್ಯುತ್ತಮ ಹಿನ್ನೆಲೆ ಗಾಯಕಿ: ಅರುಂಧತಿ ವಸಿಷ್ಠ (ದಂತ ಪುರಾಣ)
- ತೀರ್ಪುಗಾರರ ವಿಶೇಷ ಪ್ರಶಸ್ತಿ: ಸಂಚಾರಿ ವಿಜಯ್ (ನಟನೆಗಾಗಿ – ಮರಣೋತ್ತರವಾಗಿ),
- ಅತ್ಯುತ್ತಮ ವಸ್ತ್ರ ವಿನ್ಯಾಸ: ಶ್ರೀ ವಲ್ಲಿ (ಚಿತ್ರ: ಸಾರವಜ್ರ)
- ಅತ್ಯುತ್ತಮ ಪ್ರಸಾಧನ: ರಮೇಶ್ ಬಾಬು (ಚಿತ್ರ: ತಲೆದಂಡ)
- ಅತ್ಯುತ್ತಮ ಶಬ್ಧಗ್ರಹಣ: ವಿ.ಜಿ. ರಾಜನ್ (ಚಿತ್ರ: ಅಮೃತ್ ಅಪಾರ್ಟ್ಮೆಂಟ್ಸ್)
- ತೀರ್ಪುಗಾರರ ವಿಶೇಷ ಪ್ರಶಸ್ತಿ (ಪ್ರಮಾಣ ಪತ್ರ): ವಿಶ್ವಾಸ್ ಕೆ.ಎಸ್ (ವಿಶೇಷಚೇತನ ನಟ – ಅರಬ್ಬೀ)
- ಅತ್ಯುತ್ತಮ ನಿರ್ಮಾಣ ನಿರ್ವಾಹಕ: ಚಂಪಕಧಾಮ ಬಾಬು (ಕನ್ನಡಿಗ)

Be the first to comment