ದೇವಸಸ್ಯ

‘ದೇವಸಸ್ಯ’ ಟೈಟಲ್ ಟೀಸರ್ ಬಿಡುಗಡೆ

ದೇವಸಸ್ಯ ಒಂದು ವಿಶಿಷ್ಠ ಕಥಾಹಂದರವನ್ನು ಹೇಳುವ ಹಾಗೂ ಅಪರೂಪದ ಗಿಡದ ಸುತ್ತ ನಡೆಯುವ ಘಟನೆಗಳ ಗುಚ್ಛ. ಬಹುತೇಕ ಉತ್ತರ ಕನ್ನಡದವರೇ ಸೇರಿ ಮಾಡಿರುವ ಪ್ಯಾನ್ ಇಂಡಿಯಾ ಚಿತ್ರವಿದು. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ದೇಶಾದ್ಯಂತ ತೆರೆಗೆ ಬರುತ್ತಿದೆ.

ಅನಂತ ಫಿಲಂಸ್ ಅಡಿಯಲ್ಲಿ ಅನಂತಕುಮಾರ್ ಹೆಗ್ಡೆ ಅವರು ನಿರ್ಮಾಣ ಮಾಡಿರೋ ಈ ಚಿತ್ರಕ್ಕೆ ಕಾರ್ತೀಕ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ. ನಟ ನವೀನ್ ಕೃಷ್ಣ ಅವರು ಈ ಚಿತ್ರದ 5 ಭಾಷೆಯ ಟೀಸರನ್ನು ಬಿಡುಗಡೆ ಮಾಢಿದರು.

ದೇವಸಸ್ಯ

ವೇದಿಕೆಯಲ್ಲಿ ನಿರ್ದೇಶಕ ಕಾರ್ತೀಕ್ ಭಟ್ ಮಾತನಾಡಿ ಈ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಮೊದಲಿಂದಲೂ ನನಗೆ ಸಿನಿಮಾ ಹುಚ್ಚು. ಬೆಂಗಳೂರಿಗೆ ಬಂದ ಮೇಲೆ ಕೆಲವು ಸಿನಿಮಾ, ಸೀರಿಯಲ್ ಗಳಿಗೆ ಬರಹಗಾರನಾಗಿ ಕೆಲಸ ಮಾಡಿದೆ. ಸಿರ್ಸಿ ಸುತ್ತಮುತ್ತಲಿನ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಸಮುದಾಯದ ಕಥೆಯಿದು. ನಿರ್ಮಾಪಕರ ಪರಿಚಯ ಆದಮೇಲೆ ಅವರಿಗೆ ಈ ಕಥೆ ಹೇಳಿದೆ. ಕಥೆಯನ್ನು ತುಂಬಾನೇ ಇಷ್ಟಪಟ್ಟು ನಿರ್ಮಾಣ ಮಾಡುತ್ತಿದ್ದಾರೆ. ಇದು ಎರಡು ಊರುಗಳ ಮಧ್ಯೆ ನಡೆಯುವ ಕಥೆ. ಕಥೆಗಾಗೇ ೨ ವರ್ಷ ಪೇಪರ್ ವರ್ಕ್ ರೆಡಿ ಮಾಡಿಕೊಂಡೆ. ಅಲ್ಲಿ ನಿರ್ಮಾಪಕರೂ ಜತೆಗಿದ್ದರು. ಸಿದ್ದಿ ಹುಡುಗನ ಪಾತ್ರವನ್ನು ಸೆಲ್ವಿನ್ ದೇಸಾಯಿ ಮಾಡಿದ್ದಾರೆ. ಮತ್ತೊಂದು ಮುಖ್ಯ ಪಾತ್ರವನ್ನು ಅಹನ ಮಾಡಿದ್ದಾರೆ.1995ರಲ್ಲಿ ನಡೆವ ಕಥೆಯಾಗಿದ್ದರಿಂದ ಅಂಥಾ ಲೊಕೇಶನ್ ಎಲ್ಲೂ ಸಿಗಲಿಲ.ಹಾಗಾಗಿ ಸಡಟ್ ಹಾಕಿಸಿದ್ದೆವೆ. ಕೆಜಿಎಫ್ ಖ್ಯಾಥಿಯ ಕರಣ್ ಅವರು ಅದ್ಭುತವಾಗಿ ಈ ಸೆಟ್ ಹಾಕಿದ್ದಾರೆ. ಈಗಾಗಲೇ 45 ದಿನಗಳ ಶೂಟಿಂಗ್ ನಡೆಣ ದಿದೆ. ಹೊಸಬರ ತಂಡ, ತುಂಬಾ ಆತ್ಮವಿಶ್ವಾಸದಿಂದ ಈ ಸಿನಿಮಾ ಮಾಡಿದ್ದೇವೆ. ದೇವಸಸ್ಯ ಏನು ಎನ್ನುವುದೇ ಚಿತ್ರ ನೋಡಿದ ನಂತರವೇ ಗೊತ್ತಾಗುತ್ತದೆ ಎಂದರು.

ನಂತರ ನಟ ಸೆಲ್ವಿನ್ ಮಾತನಾಡಿ ಸಿನಿಮಾದಲ್ಲಿ ಆಕ್ಟ್ ಮಾಡಬೇಕೆಂದೇ ನಾನು ಬೆಂಗಳೂರಿಗೆ ಬಂದೆ. ಟ್ರ್ಯಾಕ್ಟರ್ ಓಡಿಸುತ್ತಿದ್ದೆ. ಆಗ ನಿರ್ದೇಶಕರು ಈ ಸಿನಿಮಾಗೆ ಕರೆದರು ನಂತರವೇ ಆಕ್ಷನ್ ಎಲ್ಲಾ ಕಲಿತೆ ಎಂದು ವಿವರಿಸಿದರು.ಮತ್ತೊಬ್ಬನಟ ಅಹನಾ ಮಾತ‌ನಾಡುತ್ತ ಇದರಲ್ಲಿ ಕುರ್ಮುಷ್ಠ ಎಂಬ ಪಾತ್ರ ಮಾಡಿದ್ದೇನೆ ಎಂದರು.ನಾಯಕಿ ಬಿಂಬಿಕಾ ಮಾತನಾಡಿ ಚಿತ್ರದಲ್ಲಿ ನಾನು ಮಾತಂಗಿ ಎಂಬ ಸಿದ್ದಿ ಜನಾಂಗದ ಹುಡುಗಿಯಾಗಿ ನಟಿಸಿದ್ದೇನೆ. ನಾರಾಯಣ ನಾರಾಯಣ ನಂತರ ಇದು ನನ್ನ 5ನೇ ಚಿತ್ರ ಎಂದರು.

ದೇವಸಸ್ಯ

ನಿರ್ಮಾಪಕ ಅನಂತಕುಮಾರ್ ಹೆಗ್ಡೆ ಮಾತನಾಡುತ್ತ ನಾನೂ ಒಬ್ಬ ಪತ್ರಕರ್ತ. ಸಿರ್ಸಿಯಲ್ಲಿ ವಿಶ್ವಂಬರ ಟಿವಿ ಚಾನೆಲ್ ನಡೆಸುತ್ತಿದ್ದೇನೆ. ನನಗೆ ಮೊದಲಿಂದಲೂ ಸಿನಿಮಾ ಹೀರೋ ಆಗಬೇಕೆಂಬ ಆಸೆಯಿತ್ತು. ಈಗ ನಿರ್ಮಾಪಕನಾಗಿದ್ದೇನೆ.

ಹಿಂದೆ ನಮ್ಮದು ಬಡತನದ ಕುಟುಂಬ. ಬೆಂಗಳೂರಿಗೆ ಬಂದು ಅರ್ಚಕನಾಗಿ ಕೆಲಸ ಮಾಢ್ತಿದ್ದೆ. ಜನರಿಗೆ ಓಂದೊಳ್ಳೆ ಸಿನಿಮಾ ನೀಡಬೇಕೆಂದು ಈ ಚಿತ್ರ ಪ್ರಾರಂಭಿಸಿದೆ. ಅದ್ಭುತವಾದ, ವಿಶೇಷವಾದ ಸಂಜೀವಿನಿ ಗಿಡವೇ ದೇವಸಸ್ಯ. ಅದರ ಸುತ್ತ ನಡೆವ ಕಥೆಯಿದು.

30 ವರ್ಷಗಳ ಹಿಂದಿದ್ದ ಊರನ್ನು ಮರುಸೃಷ್ಠಿ ಮಾಡಿದ್ದೇವೆ. ಒಂದು ಸಸ್ಯದ ಕುರಿತಂತೆ ಮಾಡಿರುವ ಕಥೆಯಾಗಿದ್ದರಿಂದ ಎಲ್ಲಾ ಭಾಷೆಗಳಿಗೂ ಅನ್ವಯವಾಗುತ್ತೆ ಅಂತ 5 ಭಾಷೆಗೂ ಡಬ್ ಮಾಡುತ್ತಿದ್ದೇವೆ ಎಂದು ಹೇಳಿದರು. ರಾಜು ಎನ್.ಎಂ.ಅವರ ಛಾಯಾಗ್ರಹಣ, ಹರಿ ಅಜಯ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!