ಗಣೇಶ್ ಚಿತ್ರಕ್ಕೆ ಶ್ರೀನಿವಾಸ್ ರಾಜು ನಿರ್ದೇಶನ

ಗೋಲ್ಡನ್ ಸ್ಟಾರ್ ಗಣೇಶ್ ಮುಂದಿನ ಚಿತ್ರಕ್ಕೆ ಶ್ರೀನಿವಾಸ್ ರಾಜು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ನ್ನೂ ಹೆಸರಿಡದ ಈ ಸಿನಿಮಾದ ಮುಹೂರ್ತ ಆಗಸ್ಟ್ 3 ರಂದು ನಡೆದಿದ್ದು, ಮೈಸೂರು ಹಾಗೂ ಸುತ್ತಮುತ್ತ  ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಗಣೇಶ್ ಅವರು  ಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರ  ರೊಮ್ಯಾಂಟಿಕ್ ಫ್ಯಾಮಿಲಿ ಕಥೆಯನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ.

ಚಿತ್ರದಲ್ಲಿ ಇಬ್ಬರು ನಾಯಕರಿದ್ದು, ದೇವಿಕಾ ಭಟ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. 2ನೇ ನಾಯಕಿಗಾಗಿ ಚಿತ್ರತಂಡ ಹುಡುಕಾಟ ಮುಂದವರೆಸಿದೆ.  ಪಾತ್ರವರ್ಗಗಳ ಬಗ್ಗೆ ಚಿತ್ರತಂಡ  ಗುಟ್ಟು ಬಿಟ್ಟು ಕೊಟ್ಟಿಲ್ಲ.

ಮೊದಲ 50 ದಿನಗಳ ಚಿತ್ರೀಕರಣ  ಮೈಸೂರು ಮತ್ತು ಸುತ್ತಮುತ್ತ ನಡೆಯುತ್ತಿದೆ. ಇದಲ್ಲದೆ  ಚಿತ್ರತಂಡ  ಕೇರಳ, ಉತ್ತರ ಭಾರತ, ಭೂತಾನ್ ಮತ್ತು ಪ್ಯಾರಿಸ್‌ನ ಸುಂದರವಾದ ಸ್ಥಳಗಳನ್ನೂ ಕೂಡ ಅನ್ವೇಷಿಸುತ್ತಿದೆ ಎಂದು ತಿಳಿದು ಬಂದಿದೆ.

ಸಮೃದ್ಧಿ ಮಂಜುನಾಥ್ ನಿರ್ಮಿಸಿ,  ವಿರಾಟ್ ಸಾಯಿ ಕ್ರಿಯೇಷನ್ಸ್ ಪ್ರಸ್ತುತಪಡಿಸಿದ  ಈ ಚಿತ್ರದಲ್ಲಿ ಛಾಯಾಗ್ರಾಹಕರಾಗಿ ವೆಂಕಟ್ ಪ್ರಸಾದ್ ,  ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜಿಸಲಿದ್ದಾರೆ. ವಿಜಯ್ ಈಶ್ವರ್ ಮತ್ತು ಕ್ರಾಂತಿ ಕುಮಾರ್  ಸಂಭಾಷಣೆ ಬರೆಯುತ್ತಿದ್ದಾರೆ.

ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಕಳೆದ ವರ್ಷ ಸೂಪರ್ ಹಿಟ್ ಆಗಿತ್ತು.  ಇದೀಗ ‘ಕೃಷ್ಣಂ ಪ್ರಣಯ ಸಖಿ’ ಕಾಂಬಿನೇಷನ್‌ನಲ್ಲಿ ಮತ್ತೊಂದು ಸಿನಿಮಾ ಬರುತ್ತಿದೆ.

—–

This Article Has 7 Comments
  1. Pingback: buy cheap androxal price dubai

  2. Pingback: cheap enclomiphene generic cheap

  3. Pingback: how to order xifaxan canada online order

  4. Pingback: cheap staxyn generic lowest price

  5. Pingback: dutasteride without a rx

  6. Pingback: get fildena generic free shipping

  7. Pingback: objednat kamagra online

Leave a Reply

Your email address will not be published. Required fields are marked *

Translate »
error: Content is protected !!