ಈ ವಾರ ತೆರೆಗೆ ‘ಮಜ್ಜಿಗೆ ಹುಳಿ’

ಎಸ್.ಎಲ್.ವಿ ಆರ್ಟ್ಸ್ ಲಾಂಛನದಲ್ಲಿ ಎಸ್.ರಾಮಚಂದ್ರ ಅವರು ನಿರ್ಮಿಸಿರುವ ‘ಮಜ್ಜಿಗೆ ಹುಳಿ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ರಘುರಾಜ್ ಹಾಗೂ ಗಂಗಾಧರ್ ಈ ಚಿತ್ರದ ಸಹ ನಿರ್ಮಾಪಕರು.

ರವೀಂದ್ರ ಕೊಟಕಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ನಿರ್ದೇಶನವನ್ನು ಮಾಡಿರುವ ಈ ಚಿತ್ರಕ್ಕೆ ಎಂ.ಸಂಜೀವರಾವ್ ಸಂಗೀತ ನೀಡಿದ್ದಾರೆ. ನರಸಿಂಹಮೂರ್ತಿ, ಶ್ಯಾಂಸುಂದರ್ ಛಾಯಾಗ್ರಹಣ, ಸಂಜೀವರೆಡ್ಡಿ ಸಂಕಲನ ಹಾಗೂ ಅರವಿಂದ್, ಹೈಟ್ ಮಂಜು, ಗಗಂ ರಾಜು ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ದೀಕ್ಷಿತ್ ವೆಂಕಟೇಶ್, ರೂಪಿಕಾ, ಸುಚೀಂದ್ರ ಪ್ರಸಾದ್, ಮೋಹನ್ ಜುನೇಜ, ರಮೇಶ್ ಭಟ್, ಮಿಮಿಕ್ರಿ ದಯಾನಂದ್, ತರಂಗ ವಿಶ್ವ, ಕೆಂಪೇಗೌಡ, ಕುರಿ ಸುನೀಲ್, ಮಲ್ಲೇಶ್, ಶಂಕರ್‍ನಾರಾಯಣ್ ಮುಂತಾದವರಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!